ಮುಂಬೈ: ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಅಂತ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಮರಾಠ ಭಾಷಿಕರ ಪ್ರದೇಶ ಹಾಗೂ ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ. ಅಲ್ಲಿಯವರೆಗೂ ನಾನು ಸುಮ್ಮನೆ ಕೂರುವುದಿಲ್ಲವೆಂದು ಎಂದಿದ್ದಾರೆ.
ನಾವು ನ್ಯಾಯಾಂಗ ನಿಂದನೆ ಮಾಡ್ತಿಲ್ಲ, ಕರ್ನಾಟಕ ಸರ್ಕಾರದಿಂದಲೇ ಈ ಕೆಲಸವಾಗ್ತಿದೆ. ಬೆಳಗಾಂವ್ ಅನ್ನ’ಬೆಳಗಾವಿ’ ಎಂದು ಮರುನಾಮಕರಣ ಮಾಡಲಾಗಿದ್ದು, ಸುವರ್ಣಸೌಧ ಕಟ್ಟಿಸಿ ಅಧಿವೇಶನ ನಡೆಸುತ್ತಿದ್ದಾರೆ. ಬೆಳಗಾವಿಯನ್ನು ಎರಡನೇ ರಾಜಧಾನಿ ಅಂತ ಘೋಷಿಸಿದ್ದಾರೆ . ಇದು ನ್ಯಾಯಾಂಗ ನಿಂದನೆ ಅಲ್ವಾ. ಕರ್ನಾಟಕ ಸರ್ಕಾರವೇ ಕಾನೂನು ಪಾಲನೆ ಮಾಡ್ತಿಲ್ಲ. ಕರ್ನಾಟಕದ ಎಲ್ಲ ಸರ್ಕಾರಗಳಿಂದ ಮರಾಠಿಗರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಭಾಷಾವಾರು ಪ್ರಾಂತ್ಯ ರಚನೆ ವೇಳೆ ಅನ್ಯಾಯವಾಗಿದೆ. ಕನ್ನಡಿಗರು ಮಾಡುತ್ತಿರುವ ದೌರ್ಜನ್ಯವನ್ನು ನಾವು ಸಹಿಸಲ್ಲ. ಬೆಳಗಾವಿಯಲ್ಲಿ ಮರಾಠಿ ಭಾಷಿಕ ಶಾಸಕರು ಮತ್ತೆ ಆಯ್ಕೆ ಆಗಿ ಬರಬೇಕು. ಕರ್ನಾಟಕ ಸರ್ಕಾರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದಿದ್ದಾರೆ.



