ನವದೆಹಲಿ: ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನವನ್ನು ಕೇಂದ್ರ ಗೃಹಸಚಿವ ಅಮಿತ್ ಷಾ ಖಂಡಿಸಿದ್ದು, ಮಹಾರಾಷ್ಟ್ರ ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯ ಹರಣ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2 ವರ್ಷದ ಹಳೆಯ ಪ್ರಕರಣಕ್ಕೆ ಸಬಂಧಿಸಿದಂತೆ ಮಹಾರಾಷ್ಟ್ರದ ಪೊಲೀಸರು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದಾರೆ. ಆ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ಮಹಾರಾಷ್ಟ್ರದಲ್ಲಿನ ಬೆಳವಣಿಗೆ ತುರ್ತುಪರಿಸ್ಥಿತಿಯ ದಿನಗಳನ್ನು ಮತ್ತೆ ನೆನಪಿಗೆ ಬರುವಂತೆ ಮಾಡಿದೆ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಈಗಾಗಲೇ ಖಂಡಿಸಿದ್ದಾರೆ.
Congress and its allies have shamed democracy once again.
Blatant misuse of state power against Republic TV & Arnab Goswami is an attack on individual freedom and the 4th pillar of democracy.
It reminds us of the Emergency. This attack on free press must be and WILL BE OPPOSED.
— Amit Shah (@AmitShah) November 4, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ಅಣಕಿಸಿವೆ. ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರ ಮೇಲಿನ ದಾಳಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಹರಣ ಎಂದು ಖಂಡಿಸಿದ್ದಾರೆ. ಮಹಾರಾಷ್ಟ್ರರ ಸರ್ಕಾರ ಅಧಿಕಾರ ದುರ್ಬಳಕ ಮಾಡಿಕೊಂಡಿದೆ. ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಖಂಡನಾರ್ಹ ಎಂದು ಗುಡುಗಿದ್ದಾರೆ.



