Connect with us

Dvgsuddi Kannada | online news portal | Kannada news online

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1 ರಂದು ಚುನಾವಣೆ

ಪ್ರಮುಖ ಸುದ್ದಿ

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1 ರಂದು ಚುನಾವಣೆ

ನವದೆಹಲಿ: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಅವರ ನಿಧನದಿಂದ  ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಚುನಾವಣೆ ನಿಗದಿಯಾಗಿದೆ.

ಈ ಕುರಿತು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದ್ದು, ರಾಯಚೂರಿನ ಬಿಜೆಪಿ ಮುಖಂಡ ಅಶೋಕ್‌ ಗಸ್ತಿ ಅವರು ಕೊರೊನಾದಿಂದ ಸೆಪ್ಟೆಂಬರ್‌ನಲ್ಲಿ ಮೃತಪಟ್ಟರು. ರಾಜ್ಯದಲ್ಲಿ ಮೊದಲ ಬಾರಿಗೆ  ಸವಿತಾ ಸಮಾಜದಿಂದ ಅಶೋಕ ಗಸ್ತಿ ಆಯ್ಕೆಯಾಗಿದ್ದರು.  ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದ ಗಸ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

ಡಿಸೆಂಬರ್‌ 1ರಂದು ಚುನಾವಣೆ ನಿಗದಿಯಾಗಿದ್ದು, ಅಂದು ಸಂಜೆಯೇ ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂಬಂಧ ನವೆಂಬರ್‌ 11ರಂದು ಅಧಿಸೂಚನೆ ಹೊರಬರಲಿದೆ  ಹಾಗೂ ನಾಮನಿರ್ದೇಶನ ಸಲ್ಲಿಕೆಗೆ ನವೆಂಬರ್‌ 18 ಕೊನೆಯ ದಿನವಾಗಿರಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top