Connect with us

Dvgsuddi Kannada | online news portal | Kannada news online

ಜಮ್ಮು, ಕಾಶ್ಮೀರ  ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆ ಮೈತ್ರಿಕೂಟದಲ್ಲಿ ನಾವಿಲ್ಲ: ಕಾಂಗ್ರೆಸ್  

ರಾಷ್ಟ್ರ ಸುದ್ದಿ

ಜಮ್ಮು, ಕಾಶ್ಮೀರ  ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆ ಮೈತ್ರಿಕೂಟದಲ್ಲಿ ನಾವಿಲ್ಲ: ಕಾಂಗ್ರೆಸ್  

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಕಾಂಗ್ರೆಸ್ ಪಕ್ಷ.  ಇದೀಗ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಗಾಗಿ  ರಚಿಸಲಾಗಿರುವ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದ ಪ್ರಾದೇಶಿಕ ಪಕ್ಷಗಳು ಸೇರಿ ವಿಶೇಷ ಸ್ಥಾನಮಾನ ಪುನಃಸ್ಥಾಪನೆಗಾಗಿ ಗುಪ್ಕಾರ್ ಮೈತ್ರಿಕೂಟವನ್ನು ರಚಿಸಿಕೊಂಡಿದ್ದವು.  ಇದರ ಭಾಗವಾಗಿ ಕಾಂಗ್ರೆಸ್ ಇಲ್ಲ. ಅಲ್ಲದೆ ಈ ಮೈತ್ರಿಕೂಟದ ಯಾವುದೇ ವ್ಯಕ್ತಿಗಳ ಜೊತೆಗೂ ಕಾಂಗ್ರೆಸ್ ಪಕ್ಷ ಸಂಪರ್ಕದಲ್ಲಿಲ್ಲ ಎಂದು ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಘೋಷಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಈ ಮೈತ್ರಿಕೂಟದ ಮುಖ್ಯಸ್ಥರಾಗಿದ್ದು 2019ರ ಆಗಸ್ಟ್ 4ರಂದು ಈ ಮೈತ್ರಿಕೂಟವನ್ನು ಸ್ಥಾಪಿಸಲಾಗಿತ್ತು. ಶ್ರೀನಗರ ಗುಪ್ಕಾರ್ ಭವನದಲ್ಲಿ ನಡೆದ ಸಭೆ ಬಳಿಕ ಘೋಷಣೆ ಪ್ರಕಟವಾದ ಕಾರಣ ಇದು ಗುಪ್ಕಾರ್ ಕೂಟ ೆಂದು ಕರೆಯಲಾಗಿತ್ತು.

ಕಾಂಗ್ರೆಸ್ ಮತ್ತು ಗುಪ್ಕಾರ್ ಗ್ಯಾಂಗ್  ಜಮ್ಮು ಮತ್ತು ಕಾಶ್ಮೀರವನ್ನು ಭಯೋತ್ಪಾದನೆ ಮತ್ತು ಪ್ರಕ್ಷುಬ್ಧತೆಯ ಯುಗಕ್ಕೆ ಹಿಂತಿರುಗುವಂತೆ ಮಾಡಲು ಉದ್ದೇಶಿಸಿದೆ. ಅಲ್ಲದೆ ನಾವು ತೆಗೆದು ಹಾಕಿದ್ದ “370ನೇ ವಿಧಿಯನ್ನು ಮರುಸ್ಥಾಪಿಸುವ ಮೂಲಕ ದಲಿತರು, ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟೀಸಿಕಿದ್ದರು. ಇದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top