ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾವೈರಸ್ ಲಸಿಕೆ ಡ್ರೈ ರನ್ ಪರಿಶೀಲನೆ ನಡೆಸಿದರು. ಯೋಜನೆ ಮತ್ತು ಅನುಷ್ಠಾನ ವೀಕ್ಷಿಸಿದರು. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಇಂದು ಕೊವಿಡ್ ಲಸಿಕೆಗಾಗಿ ಒಂದು ಡ್ರೈ ರನ್ ನಡೆಸುತ್ತಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮಾರ್ಗಸೂಚಿ ಪ್ರಕಾರ ದೇಶಾದ್ಯಂತ ಡ್ರೈ ರನ್ ನಡೆಸಲಾಗುತ್ತಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ ನಡೆಸಲಾಗುತ್ತಿದೆ. ಲಸಿಕೆ ಯನ್ನು ನೀಡುವುದು ಬಿಟ್ಟು, ಎಲ್ಲ ವ್ಯವಸ್ಥೆಯ ಅನುಷ್ಠಾನದ ಪ್ರಯೋಗಿಕತೆ ನಡೆಯಿತು.
ಕೊರೊನಾ ವೈರಸ್ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹರ್ಷವರ್ಧನ್ ಹೇಳಿದರು. ‘ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜನರಲ್ಲಿ ಮನವಿ ಮಡಿದರು. ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಪೋಲಿಯೊ ಲಸಿಕೆ ಹಾಕುವ ಸಂದರ್ಭದಲ್ಲಿ ವಿವಿಧ ರೀತಿಯ ವದಂತಿಗಳು ಹಬ್ಬಿದ್ದವು, ಆದರೆ ಜನರು ಲಸಿಕೆಯನ್ನು ತೆಗೆದುಕೊಂಡರು ಮತ್ತು ಭಾರತ ಈಗ ಪೋಲಿಯೊ ಮುಕ್ತವಾಗಿದೆ ಎಂದು ಹೇಳಿದರು.



