ನವದೆಹಲಿ: ಕೊರೊನಾ ಲಸಿಕೆ ಯಾವ ಸಂದರ್ಭದಲ್ಲಿಯಾದರೂ ಬರಬಹುದು. ಲಸಿಕೆ ವಿತರಣೆ ಬಗ್ಗೆ ಸರ್ವಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕೋವಿಡ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದು, ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿ, ಲಸಿಕೆ ಬಗ್ಗೆ ಚರ್ಚೆ ನಡೆಸಿದರು. ಶೀಘ್ರದಲ್ಲಿಯೇ ಕೊರೊನಾ ಲಸಿಕೆ ಲಭ್ಯವಾಗಲಿದೆ. ವಿಜ್ಞಾನಿಗಳು ಅವರ ಕೆಲಸಲ್ಲಿ ನಿರತರಾಗಿದ್ದಾರೆ ಎಂದರು.
ಯಾವುದೇ ಸಂದರ್ಭದಲ್ಲಿ ಲಸಿಕೆ ಲಭ್ಯವಾಗಬಹುದು ಎಲ್ಲಾ ರಾಜ್ಯಗಳು ಸಿದ್ಧತೆ ಮಾಡಿಕೊಳ್ಳಿ. ಲಸಿಕೆ ಬರುತ್ತೆ ಎಂದು ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ. ಲಸಿಕೆ ಬಂದ ಬಳಿಕವೂ ಉತ್ಪಾದನೆಗೆ ಕೆಲ ಸಮಯಾವಕಾಶ ಬೇಕು. ಹಾಗಾಗಿ ಅಲ್ಲಿಯವರೆಗೂ ಉದಾಸೀನ ಬೇಡ. ಕೋವಿಡ್ ಮರಣ ಪ್ರಮಾಣವನ್ನು ಕಡಿಮೆಯಾಗುವಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ ತಯಾರಿ ಮಾಡಿಕೊಳ್ಳೋಣ. ಆಯಾ ರಾಜ್ಯಗಳಲ್ಲಿ ಸರ್ಕಾರ ನಡೆಸಿರುವ ಸಿದ್ಧತೆಗಳ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ತಿಳಿಸಿದರು.



