ನವದೆಹಲಿ: ದೇಶದಲ್ಲಿ ಮಹಾಮಾರಿ ಕರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಏಮ್ಸ್ನಲ್ಲಿ ಲಸಿಕೆ ಹಾಕಿಸಿಕೊಂಡರು. ಆದರೆ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲಸಿಕೆ ನಮಗೆ ಯಾಕೆ ಎಂದಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ
ಕೊರೊನಾ ಲಸಿಕೆಯನ್ನು ಯುವಕರಿಗೆ ಹಾಕಿ. ನನಗೀಗ 70 ವರ್ಷ. ನಮ್ಮಂಥವರಿಗೆ ಏಕೆ? ನಾನು ಇನ್ನೊಂದು 15 ವರ್ಷ ಬದುಕಿರುತ್ತೇನೆ. ಯುವಕರಿಗೆ ಲಸಿಕೆ ಹಾಕಿಸುವುದು ತುಂಬಾ ಮಹತ್ವ, ಅವರು ಬಾಳಿ ಬದುಕಬೇಕಾದವರು ಎಂದು ಖರ್ಗೆ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗಷ್ಟೇ ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.



