Connect with us

Dvgsuddi Kannada | online news portal | Kannada news online

ನಿವಾರ್ ಚಂಡಮಾರುತ ಅಬ್ಬರಕ್ಕೆ 5 ಮಂದಿ ಸಾವು; ಜನಜೀವನ ಅಸ್ತವ್ಯಸ್ತ  

ರಾಷ್ಟ್ರ ಸುದ್ದಿ

ನಿವಾರ್ ಚಂಡಮಾರುತ ಅಬ್ಬರಕ್ಕೆ 5 ಮಂದಿ ಸಾವು; ಜನಜೀವನ ಅಸ್ತವ್ಯಸ್ತ  

ಚೆನ್ನೈ: ಭಾರಿ ಮಳೆ ಗಾಳಿಯ ನಿವಾರ ಚಂಡಮಾರುತಕ್ಕೆ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ ಎಂದು ಚೆನ್ನೈನ ಹವಾಮಾನ ಇಲಾಖೆ ಅಧಿಕಾರಿ ಎಸ್ ಬಾಲಚಂದ್ರನ್ ಹೇಳಿದ್ದಾರೆ.

ಚಂಡಮಾರುತ ಸದ್ಯ, ಕಡಲೂರಿನ ಪೂರ್ವ-ಆಗ್ನೇಯಕ್ಕೆ 50 ಕಿ.ಮೀ ಮತ್ತು ಪುದುಚೇರಿಯ ಪೂರ್ವ ಆಗ್ನೇಯಕ್ಕೆ ಸುಮಾರು 40 ಕಿ.ಮೀ.ದೂರದಲ್ಲಿದೆ. ಬುಧವಾರ ರಾತ್ರಿಯೇ ನಿವಾಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು. ತಮುಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದುಹೋಗಲಿದೆ. ಈ ವೇಳೆಗೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ.

ಯಾರೂ ಕೂಡ ಮೀನುಗಾರಿಕೆ, ಮೋಟರ್ ಬೋಟ್ಸ್ ಸೇರಿ ಇನ್ನಿತರ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ನಡುವೆ ಚಂಡಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement

ದಾವಣಗೆರೆ

Advertisement
To Top