ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ನಟ ಸಿಧು ಪತ್ತೆಗೆ ಸಹಕರಿಸಿದವರಿಗೆ 1 ಲಕ್ಷ ಬಹುಮಾನ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ:  ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ಜಾಥಾ ಸಂದರ್ಭ ದೆಹಲಿಯ ಕೆಂಪು ಕೋಟೆ ಮೇಲೆ ಸಿಖ್ಖರ ಧ್ವಜ ಹಾರಿಸಲು ಪ್ರಚೋದನೆ ನೀಡಿದ ಆರೋಪ ಪಂಜಾಬಿ ನಟ ದೀಪ್ ಸಿಧು ಮೇಲೆ ಕೇಳಿಬಂದಿದ್ದು, ತಲೆ ಮರೆಸಿಕೊಂಡಿರುವ ಆತನ ಪತ್ತೆಗೆ ಸಹಕರಿಸಿದವರಿಗೆ ದೆಹಲಿ ಪೊಲೀಸರು 1 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.

ಗಲಭೆಗೆ ಕಾರಣವಾದ ನಾಲ್ಕು ಪ್ರಮುಖ ವ್ಯಕ್ತಿಗಳ ಬಂಧನಕ್ಕೆ ಸಹಕರಿಸಿದವರಿಗೆ 50 ಸಾವಿರ ರೂಪಾಯಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ದೀಪ್ ಸಿಧು, ಜುಗರಾಜ್ ಸಿಂಗ್ ಹಾಗೂ ದೀಪ್ ಸಿಧು ಜೊತೆಗಿದ್ದ ಮತ್ತಿಬ್ಬರ ಪತ್ತೆಗೆ ಸಹಕರಿಸಿದರೆ ಒಂದು ಲಕ್ಷ ರೂಪಾಯಿ ನೀಡಲಾಗುವುದು  ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜನವರಿ 26ರಂದು ನಡೆದ ಗಲಭೆ ಪ್ರಕರಣ ನಡೆದಿತ್ತು.

ಜನವರಿ 29ರಂದು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ದೀಪ್ ಸಿಧು, ನನಗೆ ಸತ್ಯ ಹೊರತರಲು ಸಮಯ ಕೊಡಿ, ನಾನು ತನಿಖೆಗೆ ಹಾಜರಾಗುತ್ತೇನೆ ಎಂದು ಕೇಳಿಕೊಂಡು ಎರಡು ದಿನಗಳ ನಂತರ ಪೊಲೀಸರಿಗೆ ಶರಣಾಗುವುದಾಗಿ ತಿಳಿಸಿದ್ದರು.ಜಂಟಿ ಆಯುಕ್ತ ಬಿಕೆ ಸಿಂಗ್ ಹಾಗೂ ಮೂವರು ಡಿಸಿಪಿಗಳಾದ ಜಾಯ್ ಟರ್ಕಿ, ಬೇಶಾಮ್ ಸಿಂಗ್, ಮೋನಿಕಾ ಭಾರದ್ವಾಜ್ ಅವರ ನೇತೃತ್ವದಲ್ಲಿ ದೆಹಲಿ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹಾಗೂ ಕೇಂದ್ರ ಸರ್ಕಾರ ಕಾನೂನಿನಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *