ನವದೆಹಲಿ : ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಸೋಂಕು ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಂದಿನಿಂದ ನವೆಂಬರ್ 30 ವರೆಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.
ಇಂದು ಮಧ್ಯರಾತ್ರಿಯಿಂದ ನವೆಂಬರ್ 30 ರವರೆಗೆ ದೆಹಲಿ-ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿಗಳನ್ನು ಮಾರಾಟ ಮಾಡಲು ಅಥವಾ ಬಳಸಲು ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ದೆಹಲಿಯ ಹಲವಾರು ಸ್ಥಳಗಳಲ್ಲಿ ವಾಯುಗುಣಮಟ್ಟ ಕುಸಿಯುತ್ತಿದ್ದು, ಸತತ ಮೂರನೇ ದಿನವೂ ಗಾಳಿಯ ಗುಣಮುಟ್ಟ ಕುಸಿಯುತ್ತಿದೆ.
ರಾಜಧಾನಿಯ ಕೆಲವು ಭಾಗಗಳು ಹೊಗೆಯಿಂದ ಕೂಡಿದ್ದವು, ದೆಹಲಿ-ಎನ್ಸಿಆರ್ ಪ್ರತಿ ಚಳಿಗಾಲದಲ್ಲೂ ಈ ಸಮಸ್ಯೆ ಎದುರಿಸುತ್ತದೆ. , ಇದು ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಕೈಗಾರಿಕೆಗಳಿಂದ ಈ ಪರಿಸ್ಥಿತಿ ಉಂಟಾಗಿದೆ.



