Connect with us

Dvgsuddi Kannada | online news portal | Kannada news online

ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ; ಪಿಎಂ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

gas

ಪ್ರಮುಖ ಸುದ್ದಿ

ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ; ಪಿಎಂ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು; ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆಯಲು ಆನ್‌ಲೈನ್‌ ಮತ್ತು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಗ್ರಾಹಕರು ನೇರವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಮಹಿಳೆಯರು ಮತ್ತು ಮಕ್ಕಳ‌ ಆರೋಗ್ಯವನ್ನು ರಕ್ಷಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.‌ ಹೀಗಾಗಿ ಹೊಗೆ‌ ಮುಕ್ತ ಅಡುಗೆಮನೆ ನಿರ್ಮಾಣ. ಮತ್ತು ಉರುವಲು ಸಂಗ್ರಹಿಸಲು ಅಸುರಕ್ಷಿತ ಪ್ರದೇಶಗಳಲ್ಲಿ ಅಲೆದಾಟ ತಪ್ಪಿಸಲು ಕೇಂದ್ರ ಸರ್ಕಾರ ಪಿಎಂಯುವೈ ಉಚಿತ ಗ್ಯಾಸ್ ಸಂಪರ್ಕ ಜಾರಿ ತಂದಿದೆ.

ಭಾರತ ಸರ್ಕಾರವು ದೇಶದ ಬಿಪಿಎಲ್ ‌ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ದೇಶೀಯ ಎಲ್ಪಿಜಿಯನ್ನು ಒದಗಿಸುತ್ತಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಡಿಯಲ್ಲಿ ಜಾರಿಗೆ ತರಲಾಗುತ್ತಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ದೇಶಾದ್ಯಂತ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕುಟುಂಬಗಳ ಮಹಿಳೆಯರ ಹೆಸರಿನಲ್ಲಿ 5 ಕೋಟಿ ಎಲ್ಪಿಜಿ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪಿಎಂಯುವೈ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2016ರ ಮೇ 1ರಂದು ಪ್ರಾರಂಭಿಸಿದ್ದರು.

ಯಾರು ಅರ್ಹರು; ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲ ಷರತ್ತು ಎಂದರೆ ಅರ್ಜಿದಾರರು ಮಹಿಳೆಯಾಗಿರಬೇಕು. ಮಹಿಳೆಯ ವಯಸ್ಸು 18 ವರ್ಷ ಮೀರಿರಬಾರದು. ಅವಳು ಬಿಪಿಎಲ್ ಕುಟುಂಬದಿಂದ ಬಂದಿರಬೇಕು.ಬಿಪಿಎಲ್ ಕಾರ್ಡ್ ಮತ್ತು ಪಡಿತರ ಚೀಟಿ ಹೊಂದಿರಬೇಕು. ಈಗಾಗಲೇ ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಎಲ್ಪಿಜಿ ಸಂಪರ್ಕ ಇರಬಾರದು.

ಪಿಎಂಯುವೈ ಯೋಜನೆಗೆ ಬೇಕಾದ ದಾಖಲೆಗಳು; ಪಂಚಾಯತ್ ಪ್ರಧಾನ್ / ಪುರಸಭೆ ಅಧ್ಯಕ್ಷರಿಂದ ಅಧಿಕೃತಗೊಂಡ ಬಿಪಿಎಲ್ ಪ್ರಮಾಣಪತ್ರ. ಒಂದು ಫೋಟೋ ಐಡಿ (ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ). ಇತ್ತೀಚಿನ ಪಾಸ್ಪೋರ್ಟ್ ಛಾಯಾಚಿತ್ರ ಅರ್ಜಿ ಸಲ್ಲಿಸಲು ಅಗತ್ಯವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?: ಹತ್ತಿರದ ಎಲ್ಪಿಜಿ ವಿತರಣಾ ಏಜೆನ್ಸಿಯಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮತ್ತು ಸಲ್ಲಿಸುವ ಮೂಲಕ ಆಫ್ಲೈನ್ ಮೋಡ್ ಮೂಲಕ ಮಾತ್ರ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸುವಾಗ, ಮನೆಯ ಎಲ್ಲಾ ಸದಸ್ಯರ ವಿವರವಾದ ವಿಳಾಸ, ಜನಧನ್ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ.

ಆನ್‌ಲೈನ್‌; ಉಜ್ವಲ ಯೋಜನೆಯ ಲಾಭ ಪಡೆಯಲು ನೀವು ಮೊದಲು ವೆಬ್‌ಸೈಟ್‌ ವಿಳಾಸ https://www.pmuy.gov.in/ujjwala2.html
ಅಧಿಕೃತ ವೆಬ್ ಸೈಟ್ ಗೆ ಭೆಟಿ ನೀಡಿ, ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ,‌ನಿಮ್ಮ ಹತ್ತಿರದ ಎಲ್ಪಿಜಿ ಕೇಂದ್ರದಲ್ಲಿ ಸಲ್ಲಿಸಬೇಕು.ದಾಖಲೆಗಳ ಪರಿಶೀಲನೆಯ ನಂತರ ಉಚಿತ ಎಲ್ ಪಿಜಿ ಸಂಪರ್ಕ ಸಿಗಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top