Connect with us

Dvgsuddi Kannada | online news portal | Kannada news online

ಜೂ.1ರಿಂದಲೇ ಮುಂಗಾರು ಮಳೆ ಶುರು; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ

ಜೂ.1ರಿಂದಲೇ ಮುಂಗಾರು ಮಳೆ ಶುರು; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ಬಾರಿಯ ಮುಂಗಾರು ಮಳೆ ಜೂ.4ರಿಂದ ಶುರುವಾಗಲಿದೆ ಎಂದು ಹೇಳಿದ್ದ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೊಸ ಮುನ್ನೆಚ್ಚರಿಕೆ ನೀಡಿದ್ದು, ಜೂ.1ರಿಂದಲೇ ಮುಂಗಾರು ಮಳೆ ಶುರುವಾಗಲಿದೆ ಎಂದು ತಿಳಿಸಿದೆ.

ಮುಂಗಾರು ಮಳೆಗೆ ಕಾರಣವಾಗುವ ನೈಋತ್ಯ ಮಾರುತಗಳು ಬಂಗಾಲ ಕೊಲ್ಲಿಯ ಆಗ್ನೇಯ ಭಾಗ, ದಕ್ಷಿಣ ಅಂಡಮಾನ್‌ ಸಮುದ್ರದ ಭಾಗದಲ್ಲಿ ಏಳಲು ಶುರುವಾಗಿವೆ. ಹೀಗಾಗಿ ನಿರೀಕ್ಷೆಯಂತೆಯೇ ಜೂ.1ರಿಂದಲೇ ಮಳೆಗಾಲ ಶುರುವಾಗುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಮುಂದಿನ ಐದು ದಿನಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ನಂತರ ಮುಂಗಾರು ಮಳೆಯ ಸೂಚನೆಗಳು ಮತ್ತಷ್ಟು ಪ್ರಬಲವಾಗಲಿದೆ. ಕಳೆದ ವರ್ಷ ಮೇ 29ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿತ್ತು. 2021ರಲ್ಲಿ ಜೂ.3 ಮುಂಗಾರು ಪ್ರವೇಶಿಸಿತ್ತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top