Connect with us

Dvgsuddi Kannada | online news portal | Kannada news online

ಭೀಕರ ಅಪಘಾತದಲ್ಲಿ 9 ಮಂದಿ ಸಾವು; ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿಕೊಂಡು ವಾಪಸ್ ಬರುವಾಗ ಅಪಘಾತ

mub aacident

ರಾಷ್ಟ್ರ ಸುದ್ದಿ

ಭೀಕರ ಅಪಘಾತದಲ್ಲಿ 9 ಮಂದಿ ಸಾವು; ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿಕೊಂಡು ವಾಪಸ್ ಬರುವಾಗ ಅಪಘಾತ

ಮುಂಬೈ:  ಟ್ರಕ್ -ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಒಂದು ಮಗು, ಮೂವರು ಮಹಿಳೆಯರು ಸೇರಿ 9 ಮಂದಿ ದಾರುಣ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಗೋವಾ ಹೆದ್ದಾರಿಯಲ್ಲಿ ಇಂದು ನಸುಕಿನಲ್ಲಿ ಈ ದುರ್ಘಟನೆ  ಸಂಭವಿಸಿದೆ. ವೇಗವಾಗಿ ಚಲಾಯಿಸುತ್ತಿದ್ದ ಟ್ರಕ್ ವ್ಯಾನಿಗೆ ಮುಖಾಮುಖಿ ಡಿಕ್ಕಿ ಹೊಡೆದು ಒಂದು ಮಗು, ಮೂವರು ಮಹಿಳೆಯರು ಸೇರಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಗಾಯಗೊಂಡು ಅದೃಷ್ಟವಶಾತ್ ಬಚಾವ್ ಆಗಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ಮುಂಬೈ-ಗೋವಾ ಹೆದ್ದಾರಿಯ ಮಂಗಾವ್ ಬಳಿಯ ರಾಯಗಢದ ರೆಪೋಲಿ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತಕ್ಕೀಡಾದ ಟ್ರಕ್ ಮುಂಬಯಿಗೆ ತೆರಳುತ್ತಿದ್ದರೆ, ವ್ಯಾನ್ ನಲ್ಲಿದ್ದವರು ಮೃತಪಟ್ಟಿದ್ದ ಮುಂಬೈ-ಗೋವಾ ಹೆದ್ದಾರಿಯ ಮೂಲಕ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ. ಮೃತ ಸಂತ್ರಸ್ಥರೆಲ್ಲ ಸಂಬಂಧಿಕರಾಗಿದ್ದು, ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ ಎಂದೂ ಅಧಿಕಾರಿ ತಿಳಿಸಿದ್ದಾರೆ. ಮೃತರೆಲ್ಲ ಗುಹಾಗರ್‌ನ ಹೆಡ್ವಿ ಗ್ರಾಮದವರು ಎಂದೂ ತಿಳಿದುಬಂದಿದೆ.ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top