Connect with us

Dvgsuddi Kannada | online news portal | Kannada news online

ದೋಷಪೂರಿತ ಎಲೆಕ್ಟ್ರಿಕ್ ಬೈಕ್ ಹಿಂಪಡೆಯದಿದ್ರೆ ದಂಡ: ಕೇಂದ್ರ ಸಚಿವ ನಿತಿನ್ ಗಡ್ಕರಿ ವಾರ್ನಿಂಗ್

ಪ್ರಮುಖ ಸುದ್ದಿ

ದೋಷಪೂರಿತ ಎಲೆಕ್ಟ್ರಿಕ್ ಬೈಕ್ ಹಿಂಪಡೆಯದಿದ್ರೆ ದಂಡ: ಕೇಂದ್ರ ಸಚಿವ ನಿತಿನ್ ಗಡ್ಕರಿ ವಾರ್ನಿಂಗ್

ನವದೆಹಲಿವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ಬೈಕ್ ಗಳಿಗೆ  ಬೆಂಕಿ ಹೊತ್ತಿಕೊಂಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ,  ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಎಲೆಕ್ಟ್ರಿಕ್ ಬೈಕ್ ತಯಾರಿಕಾ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಹಿಂಪಡೆಯದಿದ್ದರೆ ದಂಡ ವಿಧಿಸುವುದಾಗಿ ಹೇಳಿದೆ.

ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ  ಟ್ವಿಟ್  ಮಾಡಿದ್ದು, ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಸಿದ್ದಾರೆ. ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಬೇಕಾಗುತ್ತದೆ. ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಬದ್ಧವಾಗಿರಲಿದೆ. ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.

ಎಲೆಕ್ಟ್ರಿಕ್‌ ವಾಹನಗಳಿಗೆ ಸಂಬಂಧಿಸಿದ ಹಲವು ಅವಘಡಗಳು ಕಳೆದ ಎರಡು ತಿಂಗಳುಗಳಲ್ಲಿ ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿರುವುದು ಮತ್ತು ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ.ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸದಂತೆ ತಡೆಯಲು/ ಶಿಫಾರಸುಗಳನ್ನು ಮಾಡಲು ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ತಜ್ಞರ ತಂಡವನ್ನು ರಚಿಸಿದೆ ಎಂದಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top