ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಭರ್ಜರಿ ಗೆಲುವು ; ಪಂಡಾಲಂ ಮುನ್ಸಿಪಾಲಿಟಿ ಬಿಜೆಪಿ ವಶಕ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ  ಪ್ರಕಟವಾಗಿದ್ದು ಯುಡಿಎಫ್, ಎಲ್ ಡಿಎಫ್  ಮಧ್ಯೆ ನೇರ ಸ್ಪರ್ಧೆಯ ನಡುವೆ ಬಿಜೆಪಿ ನೇತೃತ್ವದ ಎನ್ ಡಿ ಎ  ಹಲವು ಪಾಲಿಕೆ, ನಗರಸಭೆ, ಪಂಚಾಯಿತಿಗಳಲ್ಲಿ ಉತ್ತಮ ಫಲಿತಾಂಶ ಪಡೆದಿದೆ.

ಎಲ್ ಡಿ ಎಫ್ ವಶದಲ್ಲಿದ್ದ ಪಂಡಾಲಂ ಮುನ್ಸಿಪಾಲಿಟಿಯನ್ನು ಬಿಜೆಪಿಯ ಎನ್ ಡಿಎ  ವಶಕ್ಕೆ ಪಡೆದುಕೊಂಡಿದೆ. 30 ವಾರ್ಡುಗಳ ಫಲಿತಾಂಶ ಪ್ರಕಟವಾಗಿದ್ದು, ಎನ್ ಡಿ ಎ 17 ಸ್ಥಾನ ಗೆದ್ದುಕೊಂಡಿದೆ. ಎಲ್ ಡಿಎಫ್ 7 ಹಾಗೂ ಯುಡಿಎಫ್ 5 ಸ್ಥಾನ ಗಳಿಸಿವೆ. ಇನ್ನು 3 ವಾರ್ಡ್ ಫಲಿತಾಂಶ ಬಾಕಿ ಇದ್ದು, ಈ ಪೈಕಿ 2ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಪಂಥನಂತಿಟ್ಟ ಜಿಲ್ಲಾ ವ್ಯಾಪ್ತಿಯ ಪಂಡಾಲಂ ಮುನ್ಸಿಪಾಲಿಟಿ ಐತಿಹಾಸಿಕ ನಗರಿಯಾಗಿದ್ದು, ಶಬರಿಮಲೆ ದೇಗುಲ ನಿರ್ವಹಣೆ ಹೊತ್ತುಕೊಂಡಿರುವ ರಾಜಮನೆತನ ಕೂಡಾ ಈ ಪ್ರದೇಶದಲ್ಲಿದೆ.

ಈ ಹಿಂದೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ವಿವಾದ ತಾರಕಕ್ಕೇರಿದ್ದಾಗ ಪಂಡಾಲಂ ರಾಜಮನೆತನ ಖಡಕ್ ಎಚ್ಚರಿಕೆ ನೀಡಿತ್ತು. ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ, ಪೂಜಾಪದ್ದತಿಗೆ ಯಾವ ರೀತಿಯಲ್ಲೂ ಚ್ಯುತಿ ಬರಬಾರದು. ಭಾರೀ ಪ್ರತಿಭಟನೆಯ ನಡುವೆಯೂ ಒಂದು ವೇಳೆ 10-50ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಿದ್ದೇ ಆದಲ್ಲಿ, ದೇವಾಲಯವನ್ನು ಮುಚ್ಚಲು ರಾಜಮನೆತನ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಿಜೆಪಿ ಅಭ್ಯರ್ಥಿಗಳು ಕೊಚ್ಚಿಯ ಮೇಯರ್ ಅಕಾಂಕ್ಷಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ ಬಳಿಕ ತಿರುವನಂತಪುರಂ ಮೇಯರ್ ಕೂಡಾ ಸೋಲಿಸಿದ್ದಾರೆ. ಇದಲ್ಲದೆ ಕಣ್ಣೂರು ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ನೀಲಂಬೂರ್ ಹಾಗೂ ಕಲಚ್ಚೇರಿ ಮುನ್ಸಿಪಾಲಿಟಿಯಲ್ಲೂ ಬಿಜೆಪಿ ಗೆಲುವು ದಾಖಲಿಸಿದೆ.ತ್ರಿಶ್ಶೂರ್ ಮುನ್ಸಿಪಾಲ್ ಕಾರ್ಪೊರೇಷನ್ ನಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಬಿ ಗೋಪಾಲಕೃಷ್ಣನ್ ಸೋಲು ಕಂಡಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: 941 ಗ್ರಾಮ ಪಂಚಾಯಿತಿಯ 15,962ವಾರ್ಡ್, 152 ಬ್ಲಾಕ್ ಪಂಚಾಯಿತಿಯ 2080 ವಾರ್ಡು, 14 ಜಿಲ್ಲಾ ಪಂಚಾಯಿತಿಯ 331 ಡಿವಿಷನ್, 86 ಮುನ್ಸಿಪಾಲಿಟಿಯ 3078 ವಾರ್ಡು, 6 ಮುನ್ಸಿಪಲ್ ಕಾರ್ಪೊರೇಷನ್ ನ 414 ವಾರ್ಡುಗಳಿಗೆ ಡಿಸೆಂಬರ್ 8, 10 ಹಾಗೂ 14ರಂದು ಮತದಾನ ನಡೆಸಲಾಗಿದ್ದು, ಒಟ್ಟಾರೆ, 76% ಮತದಾನ ದಾಖಲಾಗಿತ್ತು. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಈ ಗೆಲುವು ಬಿಜೆಪಿಗೆ ಮಹತ್ವ ಪಡೆದುಕೊಂಡಿದೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *