ಕೆಲವರು ರೈತರ ಹೆಗಲ ಮೇಲೆ ಗನ್ ಇಟ್ಟ ಯುದ್ಧ ಮಾಡುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ನವದೆಹಲಿ: ನೂತನ ಕೃಷಿ ಮಸೂದೆಯನ್ನು ರಾತ್ರೋ ರಾತ್ರಿ ಜಾರಿ ತಂದಿಲ್ಲ. ಈ ವಿಚಾರದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಕೆಲವರು ರೈತರ ಹೆಗಲ ಮೇಲೆ ಗನ್ ಇಟ್ಟು ಯುದ್ಧ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಮಧ್ಯ ಪ್ರದೇಶದ ರೈಸನ್ ನಲ್ಲಿ ನಡೆದ ‘ಕಿಸಾನ್ ಕಲ್ಯಾಣ್’ ರೈತ ಸಮಾವೇಶವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡುತ್ತಾ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳು, ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ಮಾತನಾಡಿದರು.

ಕೃಷಿ ಸುಧಾರಣೆಯ ಮಸೂದೆ ಬಗ್ಗೆ ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಸ್ತ್ರೃತವಾಗಿ ಚರ್ಚೆ ನಡೆಸುತ್ತ ಬಂದಿವೆ. ಕೃಷಿ ತಜ್ಞರು, ಆರ್ಥಿಕ ತಜ್ಞರು ಮತ್ತು ಪ್ರಗತಿ ಹೊಂದಿದ ರೈತರು ನಮ್ಮ ಸರ್ಕಾರ ತಂದಿರುವ ಕೃಷಿ ಮಸೂದೆಗಳು ಬೇಕು ಎಂದಿದ್ದರು. ಎಲ್ಲರ ಆಶಯದ ಪ್ರಕಾರವೇ ಮಸೂದೆ ತರಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳಿಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ, ನಿಮ್ಮ ಹಳೆ ಚುನಾವಣಾ ಪ್ರಣಾಳಿಕೆಗಳ ಭರವಸೆ, ಆಶ್ವಾಸನೆಗಳನ್ನು ಇಂದು ನಾವು ಈಡೇರಿಸುತ್ತಿದ್ದೇವೆ. ರೈತರ ಜೀವನ ಸುಧಾರಣೆಯಾಗಬೇಕು, ಅವರು ಉದ್ಧಾರವಾಗಬೇಕೆಂಬುದೊಂದೇ ನನ್ನ ಬಯಕೆ, ರೈತರು ಉದ್ಧಾರವಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಮೂಲಕ ಆಧುನಿಕತೆ ಬರಬೇಕು ಎಂದು ಎಂಬುದು ನನ್ನ ಉದ್ದೇಶವೇ ಹೊರತು ಸ್ವಹಿತಾಸಕ್ತಿಯಿಲ್ಲ ಎಂದರು.

ರೈತರನ್ನು ಹಾದಿತಪ್ಪಿಸುವ ಕೆಲಸ ಮಾಡುವುದನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ನೂತನ ಕೃಷಿ ಮಸೂದೆ ಬಂದು ಆರೇಳು ತಿಂಗಳುಗಳಾಗಿವೆ. ಈಗ ಹಠಾತ್ತಾಗಿ ಪ್ರತಿಭಟನೆಗೆ ಏಕೆ ಇಳಿದಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ರೈತರ ಮೂಲಕ ಸುಳ್ಳುಗಳ ಸರಮಾಲೆಯನ್ನು ಹೆಣೆದು ಆಟವಾಡುತ್ತಿದ್ದಾರೆ ಎಂದು ವಿರೋಧ ಪಕ್ಷದವರನ್ನು ಟೀಕಿಸಿದರು.

ರೈತರ ಹೆಸರಿನಲ್ಲಿ ಈ ಪ್ರತಿಭಟನೆ ಆರಂಭಿಸಿದವರು ಸರ್ಕಾರ ನಡೆಸುತ್ತಿದ್ದಾಗ, ಅವರ ಆಡಳಿತಾವಧಿಯಲ್ಲಿ ರೈತರಿಗೆ  ಏನು ಕೊಟ್ಟರು.  ಹಿಂದಿನ ಸರ್ಕಾರ ಮಾಡದ ಕೆಲಸಗಳನ್ನು ಇಂದು ದೇಶದ ಜನತೆ ಮುಂದೆ, ರೈತರ ಮುಂದೆ ತೋರಿಸಿಕೊಡುತ್ತಿದ್ದೇನೆ ಎಂದರು.

ನೂತನ ಕೃಷಿ ಮಸೂದೆಯಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ಯನ್ನು ತೆಗೆದುಹಾಕಬೇಕೆಂದರೆ,   ನಾವೇಕೆ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ತರಬೇಕಾಗಿತ್ತು? ಕನಿಷ್ಠ ಬೆಂಬಲ ಬೆಲೆ ಜಾರಿಯ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ. ಅದು ಮುಂದುವರಿಯಲೇಬೇಕು. ಅದಕ್ಕಾಗಿ ನಾವು ಪ್ರತಿವರ್ಷ ಬಿತ್ತನೆ ಸಮಯಕ್ಕಿಂತ ಮೊದಲು ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಾ ಬಂದಿದ್ದೇವೆ. ಇದರಿಂದ ತಮ್ಮ ಬೆಳೆಗಳಿಗೆ ಲೆಕ್ಕಾಚಾರ ಹಾಕಲು ರೈತರಿಗೆ ಸುಲಭವಾಗುತ್ತದೆ ಎಂದು ಪ್ರಧಾನಿ ಸಮರ್ಥಿಸಿಕೊಂಡರು. ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡನ್ನು ನೀಡಲಾಗಿದೆ. ಆ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಹಿಂದೆ ಎಲ್ಲಾ ರೈತರಿಗೆ ಈ ಸೌಲಭ್ಯ ಸಿಗುತ್ತಿರಲಿಲ್ಲ. ನಾವು ನಿಯಮ ಸರಳಗೊಳಿಸಿ ದೇಶದ ಎಲ್ಲಾ ರೈತರಿಗೆ ಸಿಗುವಂತೆ ಮಾಡಿದ್ದೇವೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *