ಶ್ರೀನಗರ : ನಾನು ಕಾಶ್ಮೀರಿ ಪಂಡಿತ. ನನ್ನದು ಕಾಶ್ಮೀರಿ ಪಂಡಿತ್ ಕುಟುಂಬ. ನನಗೆ ನನ್ನ ಮನೆಗೆ ಬಂದ ಅನುಭವ ಆಗುತ್ತಿದೆ. ನನ್ನ ಕುಟುಂಬ ಜಮ್ಮು ಮತ್ತು ಕಾಶ್ಮೀರದೊಂದಿಗೆ ಸುದೀರ್ಘ ಸಂಬಂಧ ಹೊಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಶ್ಮೀರಿ ಪಂಡಿತರ ನಿಯೋಗವು ಇಂದು ನನ್ನನ್ನು ಭೇಟಿ ಮಾಡಿತು. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಬಿಜೆಪಿ ಏನೂ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನನ್ನ ಕಾಶ್ಮೀರಿ ಪಂಡಿತ್ ಸಹೋದರರಿಗೆ ನಾನು ಏನಾದರೂ ಮಾಡುವ ಭರವಸೆ ನೀಡುತ್ತೇನೆ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಳ್ಳೆಯ ಸಹೋದರತ್ವ ಸಂಬಂಧವಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಈ ಬಂಧ ಮುರಿಯಲು ಪ್ರಯತ್ನಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಎರಡು ದಿನಗಳ ಕಾಲ ಜಮ್ಮು-ಕಾಶ್ಮೀರದ ಪ್ರವಾಸದಲ್ಲಿದ್ದಾರೆ



