ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸುವ ನಿರ್ಣಯವನ್ನು ಪಂಜಾಬ್ ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ನಿರ್ಣಯ ಕೈಗೊಂಡಿದ್ದು, ಮಂಗಳವಾರ ವಿಧಾನಸಭೆಯಲ್ಲಿ ಈ ನಿರ್ಣಯ ಮಂಡನೆಯಾಗಿದೆ. ರಾಜ್ಯದ ರೈತರ ರಕ್ಷಣೆಗಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕೇಂದ್ರದ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ತಿರಸ್ಕರಿಸಲೂ ನಿರ್ಣಯ ಕೈಗೊಂಡಿದ್ದಾರೆ.
ರಾಜ್ಯದ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿ ಬದಿಗಿಟ್ಟು ಈ ನಿರ್ಣಯ ರಕ್ಷಿಸಬೇಕು ಎಂದು ಅಮರಿಂದರ್ ಸಿಂಗ್ ಮನವಿ ಮಾಡಿದ್ದಾರೆ. ವಿವಿಧ ತಜ್ಞರೊಂದಿಗೆ ಚರ್ಚೆ ನಡೆಸಿ ಕೃಷಿ ವಿರೋಧಿ ಕಾನೂನು ವಿರುದ್ಧದ ನಿರ್ಣಯ ಮಂಡನೆಗೆ ಸಹಿ ಹಾಕಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.



