Connect with us

Dvgsuddi Kannada | online news portal | Kannada news online

ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಜಾ

ರಾಷ್ಟ್ರ ಸುದ್ದಿ

ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಜಾ

ಮುಂಬೈ:  ವಿನ್ಯಾಸಕಾರ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ನ್ಯಾಯಾದಲ್ಲಿ ಮತ್ತೊಮ್ಮೆ ಹಿನ್ನೆಡೆಯಾಗಿದೆ. ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇಂದು  ವಜಾಗೊಳಿಸಿದೆ.

2018ರಲ್ಲಿ ನಡೆದ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಅವರು ಮಧ್ಯಂತರ ಜಾಮೀನಿಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂಎಸ್ ಕಾರ್ಣಿಕ್ ಅವರನ್ನು ಒಳಗೊಂಡ ನ್ಯಾಯಪೀಠ ಇಂದು ಆದೇಶ ಹೊರಡಿಸಿದ್ದು, ಅರ್ನಬ್ ಜಾಮೀನು ಅರ್ಜಿ  ತಿರಸ್ಕರಿಸಿದೆ.  ಸಿಆರ್‌ಪಿಸಿ ಸೆಕ್ಷನ್ 439ರ ಅಡಿ ಜಾಮೀನು ಮನವಿ ಮಾಡಲು ಅಲಿಬಾಗ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸಲು ಅಭ್ಯಂತರವಿಲ್ಲ ಎಂದು ಹೇಳಿದೆ.ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿ ಹಿಂಸಿಸಿದ್ದಾರೆ ಎಂದು ಜಾಮೀನು ಅರ್ಜಿಯಲ್ಲಿ ಆರೋಪಿಸಿದ್ದ ಅರ್ನಬ್, ಕೂಡಲೇ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top