Connect with us

Dvgsuddi Kannada | online news portal | Kannada news online

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ರಾಷ್ಟ್ರ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಹೈದ್ರಾಬಾದ್: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್  ಅವರು  ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದ್ರಾಬಾದ್‍ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗಷ್ಟೇ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ರಜನಿ ಅವರಿಗೆ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿದೆ.  ಸಹಜ ಸ್ಥಿತಿಗೆ ಮರಳುವವರೆಗೂ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ಅಣ್ಣಾತೈ ಚಿತ್ರದ ಚಿತ್ರೀಕರಣದ ವೇಳೆ 8 ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.

ರಜನಿಕಾಂತ್​ ಅವರು ಅಣ್ಣಾತ್ತೆ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್​ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು.ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್​ ಪ್ರತ್ಯೇಕವಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top