ಚೆನ್ನೈ: ತಮಿಳುನಾಡಿನ ಮತ್ತೆ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲೆಪಟ್ಟು ರೆಡ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಗೆ ಕಳೆದ ರಾತ್ರಿ ಮಳೆಗೆ ಕಂಬ ಉರುಳಿಬಿದ್ದು ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ. ಈಗಾಗಲೇ ಜಿಲ್ಲಾಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲಾಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ಕಚೇರಿಗಳು ಮುಚ್ಚಲಾಗಿದೆ.ಸಮುದ್ರದಲ್ಲಿ ಚಂಡಮಾರುತ ಭಾರೀ ಮಳೆಗೆ ಕಾರಣವಾಗಿದೆ.
ಚೆನ್ನೈ ನಾಲ್ಕು ಸುರಂಗ ರಸ್ತೆ ಮಾರ್ಗಗಳನ್ನು ಮುಚ್ಚಲಾಗಿದೆ. ನೀರನ್ನು ಹೊರಹಾಕಲು 145 ಕ್ಕೂ ಹೆಚ್ಚು ದೈತ್ಯ ಪಂಪ್ ಬಳಸಲಾಗಿದೆ.ಇಂದು ಬೆಳಗ್ಗಿನಿಂದ ಸಾಧಾರಣ ಮಳೆಯಾಗಿದೆ , ಮುಂದಿನ ಮೂರು ದಿನಗಳಲ್ಲಿ ಉತ್ತರ ಕರಾವಳಿ ತಮಿಳುನಾಡು ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ



