ಲೋಕಸಭಾ ಸದನದೊಳಗೆ ನುಗ್ಗಿ ಆತಂಕ ಸೃಷ್ಠಿಸಿದ್ದ ಮೈಸೂರಿನ ಯುವಕ; ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಿ ಎಂದ ಆರೋಪಿ ತಂದೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರು: ಲೋಕಸಭಾ ಕಲಾಪ ನಡೆಯುತ್ತಿರುವ ವೇಳೆ ಏಕಾಏಕಿ ಇಬ್ಬರು ಯುವರು ಸದನದೊಳಗೆ ನುಗ್ಗಿ, ಅನಿಲ ಹೊರಸೂಸುವ ವಸ್ತು ಎಸೆದು ಆತಂಕ ಸೃಷ್ಠಿಸಿದ್ದರು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಅದರಲ್ಲಿ ಒಬ್ಬ ಮೈಸೂರಿನ ಯುವಕನಾಗಿದ್ದಾನೆ.

ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ನುಗ್ಗಿದ ಯುವಕರಾದ ಸಾಗರ್ ಹಾಗೂ ಮನೋರಂಜನ್ ಆತಂಕ ಸೃಷ್ಠಿಸಿದ್ದರು. ಮನೋರಂಜನ್​ ಮೈಸೂರು ಮೂಲದವನು ಎಂದು ತಿಳಿದು ಬಂದಿದೆ. ಇನ್ನು ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್​​ ನಿವಾಸಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಮನೋರಂಜನ್ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಗ ಬಿಇ ಮುಗಿಸಿದ್ದನು. ದೆಹಲಿ, ಬೆಂಗಳೂರಿಗೆ ಓಡಾಡುತ್ತಿದ್ದ. ನನ್ನ ಪುತ್ರ ಯಾಕೆ ಈ ರೀತಿ ಮಾಡಿದ್ದಾನೆ ಎಂದು ಗೊತ್ತಿಲ್ಲ. ಆತ ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದಿದ್ದಾರೆ.

ಇವರಿಬ್ಬರಲ್ಲಿ ಒಬ್ಬರು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಆಪ್ತ ಕಾರ್ಯದರ್ಶಿಯಿಂದ ಪಾಸ್​ ಪಡೆದುಕೊಂಡು ಸಂಸತ್ತಿನೊಳಗೆ ಬಂದಿದ್ದರು. ಯಾಕೆ ಈ ರೀತಿ ಮಾಡಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *