ಡಿವಿಜಿ ಸುದ್ದಿ, ದಾವಣಗೆರೆ: ತಾಲ್ಲೂಕಿನ ದೇವರಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2020-21ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 01.05.2008 ರಿಂದ 30.04.2020 ರೊಳಗೆ ಜನಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದ್ದು, www.navodaya.gov.in ಈ ವೆಬ್ಸೈಟ್ನಲ್ಲಿ ಒದಗಿಸಲಾದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಪರೀಕ್ಷೆಯನ್ನು ಏ.10 ರಂದು ಬೆಳಿಗ್ಗೆ 11.30 ಕ್ಕೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.navodaya.gov.in ಸಂರ್ಪಕಿಸಬಹುದೆಂದು ಜವಾಹರ ನವೋಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



