ಪ್ರತಿಭಟಿಸಿದ ಮಾತ್ರಕ್ಕೆ ಕೃಷಿ ಕಾಯ್ದೆ ರದ್ದುಪಡಿಸಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಗ್ವಾಲಿಯರ್: ಸರ್ಕಾರ ಜಾರಿಗೆ ತಂದ ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಮಾತುಕತೆಗೆ  ಸರ್ಕಾರ ಸದಾ ಸಿದ್ಧವಿದ್ದು,  ಪ್ರತಿಭಟನೆಗೆ ಜನ ಸೇರಿಸಿದ ಮಾತ್ರಕ್ಕೆ ಕಾಯ್ದೆಗಳನ್ನು ರದ್ದುಪಡಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಕೃಷಿ ಕಾಯ್ದೆಯ ಯಾವ  ಅಂಶ ರೈತವಿರೋಧಿ  ಎನ್ನುವುದನ್ನು ಪ್ರತಿಭಟನಾ ಮುಖಂಡರು ಕೇಂದ್ರ ಸರ್ಕಾರಕ್ಕೆ ತೋರಿಸಿಕೊಡಲಿ. ಸರ್ಕಾರ ರೈತ ಮುಖಂಡರ ಜತೆ 12 ಸುತ್ತುಗಳ ಮಾತುಕತೆ ನಡೆಸಿದೆ. ಆದರೆ ಕೃಷಿ ಕಾಯ್ದೆಯ ಅಂಶಗಳ ಬಗ್ಗೆ ಆಕ್ಷೇಪಗಳನ್ನು ಪಟ್ಟಿ ಮಾಡಿ ತಿಳಿಸಿದಾಗ ಮಾತ್ರ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದರು.

ನೀವು ಸಾರಾಸಗಟಾಗಿ ಕಾನೂನು ರದ್ದುಪಡಿಸಿ ಎಂದು ಕೇಳುತ್ತಿದ್ದೀರಿ. ಪ್ರತಿಭಟನಾಕಾರರು ಮಾತ್ರಕ್ಕೆ ಇದು ಸಾಧ್ಯವಿಲ್ಲ  ಈ ಅಂಶ ರೈತ ವಿರೋಧಿ ಎನ್ನುವುದನ್ನು ಸಂಘಟನೆಗಳು ಸರ್ಕಾರದ ಗಮನಕ್ಕೆ ತಂದರೆ ಇಂದಿಗೂ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ಅವರ ನಿಲುವು ಕೂಡ ಇದೇ ಆಗಿದೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *