ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್ ನಂತರ ವಿದ್ಯಾರ್ಥಿವೇತನ”, “ಶುಲ್ಕವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ. 15 ರವರೆಗೆ ವಿಸ್ತರಿಸಲಾಗಿದೆ.
2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಆಹ್ವಾನಿಸಿ ಏ. 30 ಅರ್ಜಿ ಸಲ್ಲಿಕೆಗೆ ಕೊನೆ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಅಲ್ಲದೆ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೇ. 12 ರವರೆಗೂ ರಾಜ್ಯಾದ್ಯಂತ ಕೋವಿಡ್ ಕಫ್ರ್ಯೂ ಘೋಷಣೆಯಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ. 15 ರವರೆಗೆ ವಿಸ್ತರಿಸಲಾಗಿದೆ.
ವೆಬ್ಸೈಟ್ www.ssp.postmatric.karnataka.ghov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಇಲಾಖಾ ಸಹಾಯವಾಣಿ : 8050770005 ಅಥವಾ 8050770004, ಇ-ಮೇಲ್ bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ದೂರವಾಣಿ 080-35254757 ಕ್ಕೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



