Connect with us

Dvgsuddi Kannada | online news portal | Kannada news online

ಪಡಿತರ ಜೊತೆ ಬೆಲ್ಲ ವಿತರಿಸಲು ಸರ್ಕಾರ ಚಿಂತನೆ: ಎಸ್ .ಟಿ. ಸೋಮಶೇಖರ್

ಪ್ರಮುಖ ಸುದ್ದಿ

ಪಡಿತರ ಜೊತೆ ಬೆಲ್ಲ ವಿತರಿಸಲು ಸರ್ಕಾರ ಚಿಂತನೆ: ಎಸ್ .ಟಿ. ಸೋಮಶೇಖರ್

ಬೆಂಗಳೂರು:  ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದದೆ. ಅಕ್ಕಿ, ಗೋಧಿ, ರಾಗಿ, ಬೇಳೆ, ಉಪ್ಪು, ಸಕ್ಕರೆ ಜೊತೆ ಬೆಲ್ಲವನ್ನು ಪಡಿತರ ಜೊತೆಗೆ ನೀಡುವ ಚರ್ಚೆ ನಡೆದಿದೆ.ಆಲೆಮನೆಗಳ ಪುನಶ್ಚೇತನಕ್ಕೆ ಶಾಶ್ವತ ಪರಿಹಾರ ರೂಪಿಸಿ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಂಡ್ಯ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಉತ್ತಮ ಮಾರುಕಟ್ಟೆ ನಿರ್ಮಾಣ ಉದ್ದೇಶದಿಂದ ಪಡಿತರ ಪದಾರ್ಥಗಳ ಪಟ್ಟಿಯಲ್ಲಿ ಬೆಲ್ಲವನ್ನು ಸೇರ್ಪಡೆ ಮಾಡುವಂತೆ ಸಚಿವ ನಾರಾಯಣಗೌಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ಆಲೆಮನೆ, ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಪಡಿತರ ಪಟ್ಟಿಗೆ ಬೆಲ್ಲವನ್ನು ಸೇರ್ಪಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ತಮಿಳುನಾಡು, ಕೇರಳದಲ್ಲಿ ಬೆಲ್ಲ ನೀಡುತ್ತಿದ್ದು, ರಾಜ್ಯದಲ್ಲಿಯೂ ಪಡಿತರ ಚೀಟಿದಾರರಿಗೆ ರೇಷನ್ ಜೊತೆಗೆ 1 ಕೆಜಿ ಬೆಲ್ಲ ವಿತರಿಸಲು ಮನವಿ ಮಾಡಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top