Connect with us

Dvgsuddi Kannada | online news portal | Kannada news online

ಪಂಚಮಸಾಲಿ ಮೀಸಲಾತಿ ಹೋರಾಟ; ಇಂದಿನಿಂದ ಹೊಸ ಸ್ವರೂಪ ; ವಚನಾನಂದ ಶ್ರೀ ಸಾಥ್

ಪ್ರಮುಖ ಸುದ್ದಿ

ಪಂಚಮಸಾಲಿ ಮೀಸಲಾತಿ ಹೋರಾಟ; ಇಂದಿನಿಂದ ಹೊಸ ಸ್ವರೂಪ ; ವಚನಾನಂದ ಶ್ರೀ ಸಾಥ್

ದಾವಣಗೆರೆ: ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಕಿಡಿಕಾರಿದ್ದು, ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಿಲ್ಲ ಆಗ್ರಹಿಸುತ್ತೇನೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, . ಶಾಂತಿಯುತವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇಂದಿನಿಂದ ಮೀಸಲಾತಿ ನೀಡುವಂತೆ ಮನವಿ ಮಾಡುವುದಿಲ್ಲ. ಆಗ್ರಹ ಮಾಡುತ್ತೇವೆ. ಇಂದಿನಿಂದ ಹೋರಾಟ ಹೊಸ ಸ್ವರೂಪ ಪಡೆಯಲಿದೆ. ದಾವಣಗೆರೆಯಲ್ಲಿ ಬಾರುಕೋಲು ಚಳವಳಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆದಿದೆ. ದಾವಣಗೆರೆಯಿಂದ ಮುಂದುವರೆಯಲಿರುವ ಪಾದಯಾತ್ರೆಗೆ ವಚನಾನಂದ ಸ್ವಾಮೀಜಿ ಸಾಥ್ ನೀಡಲಿದ್ದಾರೆ.

ಶ್ರೀಗಳ ಜೊತೆಗೆ ದಾವಣಗೆರೆ ಜಿಲ್ಲೆ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೆಜ್ಜೆ ಹಾಕಲಿದ್ದಾರೆ. ದಾವಣಗೆರೆ ಬಾರುಕೋಲು ಚಳವಳಿ ನಡೆಸಲಾಗುವುದು ಎಂದು ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top