Connect with us

Dvgsuddi Kannada | online news portal | Kannada news online

ಮೀಸಲಾತಿ ಪಟ್ಟು ಬಿಡದ ಪಂಚಮಸಾಲಿ ಶ್ರೀ; ಮನವೊಲಿಕೆಗೆ ಬಂದ ಸಚಿವ ನಿರಾಣಿ, ಸಿಸಿ ಪಾಟೀಲ್ ನಿಯೋಗ

ಪ್ರಮುಖ ಸುದ್ದಿ

ಮೀಸಲಾತಿ ಪಟ್ಟು ಬಿಡದ ಪಂಚಮಸಾಲಿ ಶ್ರೀ; ಮನವೊಲಿಕೆಗೆ ಬಂದ ಸಚಿವ ನಿರಾಣಿ, ಸಿಸಿ ಪಾಟೀಲ್ ನಿಯೋಗ

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ  ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮೀಸಲಾತಿ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ವಾಮಿಜಿ ಪಟ್ಟು ಹಿಡಿದು ಬೆಂಗಳೂರಿನತ್ತ ಪಾದಯಾತ್ರೆ ಮುನ್ನುಗ್ಗುತ್ತಿದೆ.  ಈ ಹಿನ್ನೆಲೆಯಲ್ಲಿ ಸರ್ಕಾರದ ಪರ ನಿಯೋಗದಿಂದ ಸ್ವಾಮೀಜಿ ಮನವೊಲಿಕೆ ಯತ್ನ ಕೂಡ ನಡೆದಿದೆ. ಈಗಾಗಲೇ ಪಾದಯಾತ್ರೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ತಲುಪಿದೆ.  ಮೀಸಲಾತಿ ವಿಚಾರದಲ್ಲಿ ರಾಜಿಯಾಗುವ  ಪ್ರಶ್ನೆಯೇ ಇಲ್ಲ. ಯಾವ ನಿಯೋಗ ಬಂದರೂ ಮೀಸಲಾತಿ ಪರ ಮಾತನಾಡಲಿ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದಿಂದ  ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ ನೇತೃತ್ವದ ಸರ್ಕಾರದ ನಿಯೋಗ ಸ್ವಾಮೀಜಿ ಭೇಟಿಯಾಗಿದ್ದು, ಮನವೊಲಿಕೆ ಯತ್ನ ನಡೆಯುತ್ತಿದೆ. ಆದರೆ, ಸ್ವಾಮೀಜಿ ಪಾದಯಾತ್ರೆ ಕೈ ಬಿಡಲು ಒಪ್ಪುತ್ತಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top