ದಾವಣಗೆರೆ: ಪಂಚಮಸಾಲಿ ಸಮಾಜದ ಶಾಸಕರುಗಳು ನೀವು ರಾಜೀನಾಮೆ ಕೊಡಬೇಡಿ, ಮುಖ್ಯಮಂತ್ರಿ ಅವರೇ ರಾಜೀನಾಮೆ ನೀಡುವಂತೆ ಒತ್ತಡಹಾಕಿ ಎಂದು ಜಯಮೃತ್ಯುಂಜಯ ಶ್ರೀ ಹೇಲಿದರು.
ಹರಿಹರದಲ್ಲಿ ನಡೆದ ಪಂಚಮಸಾಲಿ ಸಮುದಾಯದ 2 ಎ ಮಿಸಲಾತಿ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಶಾಸಕರು ರಾಜೀನಾಮೆ ಕೊಟ್ಟರೆ ಪ್ರಯೋಜನವಿಲ್ಲ. ನಮ್ಮ ಬೇಡಿಕೆಯನ್ನು ಈಡೇರಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾವಾಗಿಯೇ ರಾಜೀನಾಮೆ ಕೊಡಬೇಕು ಎಂದರು.
ಪಂಚಮಸಾಲಿಯವರೇ ಸಿಎಂ ಆದ್ರೂ 2ಎ ಹೋರಾಟ ನಿಲ್ಲೋದಿಲ್ಲ. ಬಿಎಸ್ವೈ ನಮ್ಮ ಬೇಡಿಕೆ ಈಡೇರಿಸಿಲ್ಲ, ಕೇಂದ್ರದವರು ಬಿಎಸ್ವೈ ರಾಜೀನಾಮೆ ಪಡೆದರೆ, ಉತ್ತರ ಕರ್ನಾಟಕದವರೇ ಸಿಎಂ ಆಗಬೇಕು. ಲಿಂಗಾಯತರಿಗೆ ನೀಡುವಂತೆ ಹೇಳುತ್ತೇವೆ. ನಮ್ಮ ಸಮಾಜದಲ್ಲಿ 15 ಶಾಸಕರು ಸಿಎಂ ಆಗುವ ಅರ್ಹತೆ ಇದೆ ಎಂದರು.



