Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ: ಯತ್ನಾಳ್

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ: ಯತ್ನಾಳ್

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಯಾಸ, ದಣಿವು ಆಗಿದ್ದು,  ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೆಯದು  ಎಂದು ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಪಾದಯಾತ್ರೆಯಲ್ಲಿ ಮಾತನಾಡಿದ ಅವರು,  ವಯಸ್ಸಿನ ಕಾರಣದಿಂದ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದರು.

ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. ಬಿಎಸ್ ವೈ  ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. ಆದರೆ, ಬಿಎಸ್ ವೈ  ಕುಟುಂಬ ಉದ್ಧಾರ ಮಾಡಬೇಕು. ತಮ್ಮ ಕುಟುಂಬವನ್ನು ಉದ್ಧಾರ ಮಾಡಲು ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top