Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ನಡೆಯಬೇಕಿದ್ದ ಸಶಸ್ತ್ರ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಯ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮೂಂದೂಡಿಕೆ

ದಾವಣಗೆರೆ

ದಾವಣಗೆರೆ: ನಾಳೆ ನಡೆಯಬೇಕಿದ್ದ ಸಶಸ್ತ್ರ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಯ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮೂಂದೂಡಿಕೆ

ದಾವಣಗೆರೆ:  ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ಸೂಚನೆಯಂತೆ 2022-23 ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯಲಿಂಗ ಪುರುಷ) ಮಿಕ್ಕುಳಿದ ವೃಂದ-3064 ಹುದ್ದೆಗಳ ನೇಮಕಾತಿ ಸಂಬಂಧ ದಾವಣಗೆರೆ ಜಿಲ್ಲೆಗೆ ಹಂಚಿಕೆ ಮಾಡಿರುವ ಒಟ್ಟು 200 ಅರ್ಹ ಅಭ್ಯರ್ಥಿಗಳಿಗೆ Physical Standard Test and Physical Endurance Test ಪರೀಕ್ಷೆ  ಮುಂದೂಡಲಾಗಿದೆ.

ನಾಳೆ (ಜು.19) ಬೆಳಗ್ಗೆ 07-00 ಗಂಟೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಅದರನ್ವಯ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ಕ್ರೀಡಾಂಗಣದಲ್ಲಿ ನೀರು ತುಂಬಿದ್ದು, ರನ್ನಿಂಗ್ ಟ್ರ್ಯಾವಕ್ ಮೇಲೆ ಮಳೆ ನೀರು ನಿಂತಿರುವುದರಿಂದ ಹಾಗೂ ರಾತ್ರಿ ಮಳೆ ಸಂಭವ ಇರುವುದರಿಂದ ಜು.19ರಂದು ನಿಗಧಿಪಡಿಸಿರುವ Physical Standard Test and Physical Endurance Test (ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ) ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ದಿನಾಂಕವನ್ನು ನಿಗಧಿಪಡಿಸಿ ಮಾಹಿತಿಯನ್ನು ನೀಡಲಾಗುವುದು ಎಂದು ಈ ಮೂಲಕ ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಹಾಜರಾಗಲಿದ್ದ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಅಭ್ಯರ್ಥಿಗಳು ಸಹಕರಿಸಲು ಕೋರಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top