ಸಚಿವ ಸ್ಥಾನಕ್ಕಾಗಿ ಯಾರದ್ದೋ ಕಾಲು ಹಿಡಿಯುವ ಕೆಲಸ ಮಾಡಲ್ಲ: ಬಸನಗೌಡ ಪಾಟೀಲ್ ಯತ್ನಾಳ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ  ಪದೇ ಪದೇ  ಅಸಮಾಧಾನ ವ್ಯಕ್ತಪಡಿಸುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮತ್ತೆ ಹರಿಹಾಯ್ದಿದ್ದು, ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದು  ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

https://twitter.com/BRPatil_BJP/status/1318744903975800832?ref_src=twsrc%5Etfw%7Ctwcamp%5Etweetembed%7Ctwterm%5E1318744903975800832%7Ctwgr%5Eshare_3%2Ccontainerclick_0&ref_url=https%3A%2F%2Fpublictv.in%2Fmla-basangouda-patil-yatnal-attack-on-cm-bs-yediyurappa-and-govt-vijayapura

ಟ್ವೀಟ್ ಮೂಲಕ ಮತ್ತೆ ಅಸಮಾಧಾನ ಹೊರಹಾಕಿರುವ ಯತ್ನಾಳ್, ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ. ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಬರೆದುಕೊಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯಲ್ಲ ಎಂದು ಸಿಎಂ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು. ಯತ್ನಾಳ್ ಹೇಳಿಕೆ ಬಿಜೆಪಿಗರು ಮಾತ್ರವಲ್ಲದೆ, ವಿಪಕ್ಷಗಳಲ್ಲಿಯೂ ಸಾಕಷ್ಟು ಚರ್ಚೆಯಾಗಿತ್ತು. ಸಿಎಂ ಬಿ.ಎಸ್‍ವೈ ಅವರಿಗೂ ಈ ಹೇಳಿಕೆ ಇರಿಸು ಮುರಿಸು ಉಂಟು ಮಾಡಿತ್ತು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *