Connect with us

Dvgsuddi Kannada | online news portal | Kannada news online

ಸುರೇಶ್ ಅಂಗಡಿ ಕುಟುಂಬ ಗೆಲುವಿಗೆ ಶ್ರಮಿಸುವ ಬದಲು, ಅವಿರೋಧ ಆಯ್ಕೆಗೆ ಹುಕ್ಕೇರಿ  ಶ್ರಮಿಸಲಿ:  ಉಮೇಶ್ ಕತ್ತಿ   

ರಾಜಕೀಯ

ಸುರೇಶ್ ಅಂಗಡಿ ಕುಟುಂಬ ಗೆಲುವಿಗೆ ಶ್ರಮಿಸುವ ಬದಲು, ಅವಿರೋಧ ಆಯ್ಕೆಗೆ ಹುಕ್ಕೇರಿ  ಶ್ರಮಿಸಲಿ:  ಉಮೇಶ್ ಕತ್ತಿ   

ಡಿವಿಜಿ ಸುದ್ದಿ, ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂಗ್ ನೀಡಿದ್ದು, ಸುರೇಶ್ ಅಂಗಡಿ ಅವರ ಕುಟುಂಬ ಗೆಲುವಿಗೆ ಬೆಂಬಲ ನೀಡುವ  ಬದಲು, ಅವಿರೋಧ ಆಯ್ಕೆಗೆ ಹುಕ್ಕೇರಿ  ಶ್ರಮಿಸಲಿ ಎಂದು ಸಾವಲು ಹಾಕಿದ್ದಾರೆ.

ಹುಕ್ಕೇರಿ ಮಾತನಾಡಿದ ಅವರು, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಚರ್ಚಿಸಿ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಯನ್ನ ಹಾಕದಂತೆನೋಡಿಕೊಳ್ಳಲಿ ಎಂದರು. .

ಮಾಜಿ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆ ನನಗೆ ಸಂತೋಷವಾಗಿದೆ. ದಿವಂಗತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಪತ್ನಿಯನ್ನ ಆಯ್ಕೆ ಮಾಡಿ ಎಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಸೋಣ. ನಾವು ಕೂಡ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತೇವೆ. ಬೆಳಗಾವಿ ಲೋಕಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದಂತೆ ಪ್ರಕಾಶ ಹುಕ್ಕೇರಿ ನೋಡಿಕೊಳ್ಳಲಿ. ಬೆಂಗಳೂರು ಹಾಗೂ ದೆಹಲಿಯ ಹೈ ಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ಕೈಗೊಳ್ಳಲು ಒತ್ತಾಯಿಸಿದರು.

ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top