Connect with us

Dvgsuddi Kannada | online news portal | Kannada news online

ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯದೇ ವಿಜಯನಗರ ಜಿಲ್ಲೆ ಘೋಷಣೆ; ಇದರ ಪರಿಣಾಮ ಮುಂದಿನಗಳಲ್ಲಿ ಎದುರಿಸಿ: ಸೋಮಶೇಖರ್ ರೆಡ್ಡಿ

ಜಿಲ್ಲಾ ಸುದ್ದಿ

ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯದೇ ವಿಜಯನಗರ ಜಿಲ್ಲೆ ಘೋಷಣೆ; ಇದರ ಪರಿಣಾಮ ಮುಂದಿನಗಳಲ್ಲಿ ಎದುರಿಸಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ: ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸದೆ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರುವುದಕ್ಕೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ ನಗರದಲ್ಲಿ ಮಾತನಾಡಿದ ಅವರು,  ವಿಜಯನಗರ ಜಿಲ್ಲೆ ಘೋಷಣೆ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗಿಸಿರುವುದು ಈ ಸರ್ಕಾರದ ತರಾತುರಿ ನಿರ್ಧಾರ. ಈ ಹಿಂದೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಗಣಿ ಜಿಲ್ಲೆಯ ಶಾಸಕರ ಅಭಿಪ್ರಾಯ ಪಡೆದಿದ್ದರು. ಪರ -ವಿರೋಧ ಅನಿಸಿಕೆ ವ್ಯಕ್ತವಾದ ಹಿನ್ನೆಲೆ ಮತ್ತೊಮ್ಮೆ ಸಭೆ ಕರೆಯುವುದಾಗಿ ಹೇಳಿದ್ದರು.ಆದರೆ ಈಗ ಏಕಾಏಕಿ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿದ್ದಾರೆ ಎಂದು ದೂರಿದರು.

ಇದರ ಪರಿಣಾಮವನ್ನು ರಾಜ್ಯ ಸರ್ಕಾರ ಎದುರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಅಖಂಡ ಬಳ್ಳಾರಿ ಜಿಲ್ಲೆ ಮತ್ತೆ ಒಂದಾಗಲಿದೆ. ಈಸ್ಟ್, ವೆಸ್ಟ್ ಜರ್ಮನಿ ಹೇಗೆ ಒಂದಾಯ್ತು ಅದೇ ರೀತಿ ಬಳ್ಳಾರಿ ಮತ್ತೆ ಒಂದಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ನೂತನ‌ ವಿಜಯನಗರ ಜಿಲ್ಲೆ ಘೋಷಣೆ ವಿರೋಧಿ ಹೋರಾಟದ ಕುರಿತು ಚರ್ಚಿಸುವ ಸಲುವಾಗಿ ರಾಜಕೀಯ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವೆ. ಸಭೆ ನಡೆಸಿದ ಬಳಿಕ ಸಿಎಂ ಭೇಟಿಯಾಗಲಿದ್ದೇನೆ. ಸಿಎಂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಅಖಂಡ ಜಿಲ್ಲೆಯಾಗಿರಬೇಕು ಎನ್ನುವುದು ನನ್ನ ಮತ್ತು ಎಲ್ಲಾ ಶಾಸಕರ ಅಭಿಪ್ರಾಯ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top