ದಾವಣಗೆರೆ: ಜಿಲ್ಲೆಯಲ್ಲಿ ನಿಲ್ಲದ ಬಿಜೆಪಿ ಬಣ ರಾಜಕೀಯ; ಕೋರ್ ಕಮಿಟಿ ಸಭೆಗೆ ಹಾಜರ್ ಆಗದ ಸಿದ್ದೇಶ್ವರ ಟೀಂ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕಳೆದ ಲೋಕಸಭಾ ಚುನಾವಣೆ ಮುಗಿದ ಬಳಿಕ ಶುರುವಾದ ಜಿಲ್ಲಾ ಬಿಜೆಪಿ ಬಣ ಬಡಿದಾಟ ಇನ್ನೂ ಕೂಡ ತಣ್ಣಗಾಗಿಲ್ಲ. ದಿನದಿಂದ ದಿನಕ್ಕೆ ಇನ್ನಷ್ಟು ಹದಗೆಡುತ್ತಿದೆಯೋ ಹೊರತು, ಒಂದಾಗುವ ಲಕ್ಷಣ ಕಾಣುತ್ತಿಲ್ಲ. ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿಯೂ ಈ ವಿಚಾರ ಮತ್ತೆ ಪ್ರತಿಧ್ವನಿಸಿದೆ.

ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಕೋರ್‌ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ವೀಕ್ಷಕರಾಗಿ ಆಗಮಿಸಿದ್ದರು. ಆದರೆ, ಸಭೆಗೆ ಮಾಜಿ ಸಚಿವ ರೇಣುಕಾಚಾರ್ಯ ಟೀಂ ಹಾಜರಿದ್ದು, ಮಾಜಿ ಸಂಸದ ಜಿ.ಎಂ.‌ಸಿದ್ದೇಶ್ವರ‌ ಟೀಂ‌ ಗೈರು ಆಗುವ ಮೂಲಕ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಬಿಜೆಪಿ‌‌‌ ಬಣ ಬಡಿದಾಟ ನಿಲ್ಲಿಸುವಂತೆ ದೆಹಲಿ ನಾಯಕರು ಸಂದೇಶ ಕೊಟ್ಟಿದ್ದು, ಇದಕ್ಕೆ ಬ್ರೇಕ್ ಹಾಕಲು ಕೋರ್‌ಕಮಿಟಿ ಸಭೆಕರೆಯಲು ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ ದಾಸ್ ಅಗರವಾಲ್
ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದಾವಣಗೆರೆಯಲ್ಲಿ ಕೋರ್‌ಕಮಿಟಿ ಸಭೆ ಕರೆಯಲಾಗಿತ್ತು.

ಸಭೆಗೆ ಹಾಜರಾದವರು

  • ಮಾಜಿ ಸಚಿವ ರೇಣುಕಾಚಾರ್ಯ
  • ಮಾಜಿ ಸವಿವ ರವೀಂದ್ರನಾಥರ
  • ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ,
  • ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
  • ಮಾಜಿ‌ ಶಾಸಕ ಎಂ.ಬಸವರಾಜ ನಾಯ್ಕ
  • ಮುಂಡರಾದ ಲೋಕಿಕೆರೆ ನಾಗರಾಜ,‌ ಬಿ.ಜಿ. ಅಜಯಕುಮಾರ್

ಸಭೆಗೆ ಗೈರಾದವರು

  • ಕೇಂದ್ರ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ,
  • ಹರಿಹರ‌ ಶಾಸಕ ಬಿ.ಪಿ. ಹರೀಶರ
  • ಚನ್ನಗಿರಿ ತುಮ್ಕೋಸ್ ಅಧ್ಯಕ್ಷ ಎಚ್‌.ಎಸ್.
    ಶಿವಕುಮಾರ,
  • ಎಸ್‌.ಎಂ. ವೀರೇಶ ಹನಗವಾಡಿ, ಯಶವಂತ ರಾವ್‌ ಜಾಧವ್

ಈ ಸಭೆಗೆ ಮಾಜಿ ಸಚಿವರಾದ ರೇಣುಕಾಚಾರ್ಯ-ರವೀಂದ್ರನಾಥರ ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಎಂ.ಬಸವರಾಜ ನಾಯ್ಕ, ಲೋಕಿಕೆರೆ ನಾಗರಾಜ,‌ ಬಿ.ಜಿ. ಅಜಯಕುಮಾರ ಸೇರಿದಂತೆ ಇಡೀ ಟೀಂ ಸಭೆಗೆ
ಹಾಜರಾಗಿತ್ತು.ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಹರಿಹರಶಾಸಕ ಬಿ.ಪಿ. ಹರೀಶರ ಗುಂಪಿನ ಚನ್ನಗಿರಿ ತುಮ್ಮೋಸ್ ಅಧ್ಯಕ್ಷ ಎಚ್‌.ಎಸ್. ಶಿವಕುಮಾರ, ಎಸ್‌.ಎಂ. ವೀರೇಶ ಹನಗವಾಡಿ, ಯಶವಂತ ರಾವ್‌ ಜಾಧವ್
ಇತರರು ಗೈರಾಗಿದ್ದರು.

ಇತ್ತೀಚೆಗೆ ಬೆಂಗಳೂರಲ್ಲಿ ರಾಜ್ಯ ಉಸ್ತುವಾರಿ ಅಗರವಾಲ್ ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ, ಮಾಜಿ ಸಚಿವ ರೇಣುಕಾಚಾರ್ಯ ಗುಂಪುಗಳ ಪ್ರತ್ಯೇಕವಾಗಿ ತಲಾ ಒಂದೂವರೆ ಗಂಟೆ ಸಭೆ ಮಾಡಿ ಚರ್ಚಿಸಿತ್ತು‌. ಆ‌ಸಭೆಯಲ್ಲಿಯೂ ಜಿ.ಎಂ. ಸಿದ್ದೇಶ್ವರ, ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ಸಿನ ಜೊತೆಗೆ ಎದುರಾಳಿ ಬಣದವರು ಹೇಗೆಲ್ಲಾ ಹೊಂದಾಣಿಕೆ ರೇಣುಕಾ
ಚಾರ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ, ಅಲ್ಲಿಯವರೆಗೆ ಯಾವುದೇ ಸಭೆಗೂ ಬರುವುದಿಲ್ಲವೆಂದು ಸಿದ್ದೇಶ್ವರ ಪಟ್ಟುಹಿಡಿದಿದ್ದರು.

ಸಭೆ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಜ್ಞಾನೇಂದ್ರ , ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಕಾರಣಾಂತರದಿಂದ ಜಿ.ಎಂ. ಸಿದ್ದೇಶ್ವರ, ಬಿ.ಪಿ.ಹರೀಶ ಸಭೆಗೆ ಬಂದಿಲ್ಲ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *