ದಾವಣಗೆರೆ ಉಪಚುನಾವಣೆ; ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ಸ್ಫೋಟ; ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ‌ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಬೆಂಗಳೂರು; ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಳಿಕ ಮುಸ್ಲಿಂ ಸಮುದಾಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಚುನಾವಣೆ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದ ಎಂಎಲ್ ಸಿ ಕೆ.ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದಾವಣಗೆರೆ: ಸಮರ್ಥ್ ಶಾಮನೂರು ಸೋಲಿಸಲು ಪಕ್ಷದ ಹಿರಿಯರಿಂದ ದೊಡ್ಡ ಷಡ್ಯಂತ್ರ;ಸಲೀಂ ಅಹ್ಮದ್ ಆರೋಪ

ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಬಿರುಗಾಳಿ ಎದ್ದಿದೆ. ಉಪಚುನಾವಣೆಯ ಸಂದರ್ಭದಲ್ಲಿನ ಅಸಮಾಧಾನದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಸ್ಲಿಂ ಹಿರಿಯ‌ ನಾಯಕರು ಕಾಂಗ್ರೆಸ್ ಅಭ್ಯರ್ಥಿ‌ ಸೋಲಿಸಲು ಷಡ್ಯಂತ್ರ ರೂಪಿಸಿದ್ದರು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಸಿ ಸಲೀಂ ದೂರಿದ್ದರು. ಈ ಬೆಳವಣಿಗೆ ಹಿನ್ನೆಲೆ ಇದೀಗ ಕೆ.ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಅನರ್ಹ 14 ಲಕ್ಷ‌ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಶಿಫ್ಟ್ ;ಆಹಾರ ಸಚಿವರ ಮಾಹಿತಿ

ಸಚಿವ ಝಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಝಮೀರ್ ನಿರ್ಲಕ್ಷ್ಯ ಮಾಡಿದ್ದಾರೆ. ಜಮೀರ್ ಜೊತೆಗೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಸಹ ಪ್ರಚಾರದಿಂದ ದೂರ ಉಳಿದಿದ್ದರು. ಯಾರೆಲ್ಲ ಪ್ರಚಾರ ನಡೆಸಲಿಲ್ಲ, ಅವರ ವಿರುದ್ಧ ಕ್ರಮ ಆಗಲೇಬೇಕೆಂದು ಆಗ್ರಹಿಸಲಾಗಿತ್ತು. ಈ ಬೆನ್ನಲ್ಲೇ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ದಾವಣಗೆರೆ: ಸತತ ಕುಸಿತ ಬಳಿಕ ಭರ್ಜರಿ ಚೇತರಿಕೆ ಕಂಡ ಅಡಿಕೆ ರೇಟ್

ರಾಜೀನಾಮೆ ಪತ್ರದಲ್ಲಿ ಏನಿದೆ..?

ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ ಹಾಗೂ ತೀವ್ರ ದುಃಖದಿಂದ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಈ ಪತ್ರ ಬರೆಯುತ್ತಿದ್ದೇನೆ. ದುರದೃಷ್ಟವಶಾತ್, 2026ರ ಉಪಚುನಾವಣೆಯ ವೇಳೆ ದಾವಣಗೆರೆ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತರು ತೀವ್ರ ನಿರಾಶೆಗೊಂಡಿದ್ದಾರೆ.”

ಅಲ್ಪಸಂಖ್ಯಾತ, ವಕ್ಫ್ ಮತ್ತು ವಸತಿ ಸಚಿವ ಬಿ. ಝಡ್.ಝಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರು ಭೇಟಿ ನೀಡುವ ಎಲ್ಲೆಡೆ ಅವರಿಗೆ ಅಪಾರ ಗೌರವ ಹಾಗೂ ಜನಬೆಂಬಲವಿದೆ. ಆದರೆ ಉಪಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆಗೆ ಬರಬಾರದು ಎಂದು ಮಾಧ್ಯಮಗಳಲ್ಲಿ ಅವರನ್ನು ಎರಡು ಬಾರಿ ಅಗೌರವದಿಂದ ಉಲ್ಲೇಖಿಸಲಾಗಿದೆ. ಇದರಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದೆ. ಈ ಕುರಿತು ಪಕ್ಷದಿಂದ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ; ಇದುವರೆಗೆ ಕ್ಷಮೆಯಾಚನೆಯೂ ಆಗಿಲ್ಲ.

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನ ತನ್ನ ಘನತೆಯನ್ನು ಕಾಪಾಡಿಕೊಂಡಿದೆ. ಆದರೆ ದಾವಣಗೆರೆ ಉಪಚುನಾವಣೆಯ ಸಂಬಂಧವಾಗಿ ಅಲ್ಪಸಂಖ್ಯಾತ ವಿಭಾಗದ ನಾಯಕರು ಮತ್ತು ಪದಾಧಿಕಾರಿಗಳನ್ನು ಸಂಪರ್ಕಿಸಿ ಅವರ ಅಭಿಪ್ರಾಯ ಪಡೆಯಲು ಪಕ್ಷದ ನಾಯಕತ್ವದಿಂದ ಯಾವುದೇ ಪ್ರಯತ್ನ ನಡೆದಿಲ್ಲ.

ನಾನು ವಿದ್ಯಾರ್ಥಿ ಸಂಘದಿಂದ ಪ್ರಾರಂಭಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದೇನೆ. ಬಳಿಕ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷನಾಗಿದ್ದೇನೆ. ದಾವಣಗೆರೆಯೊಂದಿಗೆ ನನ್ನ ದೀರ್ಘ ನಂಟಿದೆ. ಕಾಂಗ್ರೆಸ್ ಎಲ್ಲರನ್ನು ಒಳಗೊಂಡು ಕಾರ್ಯನಿರ್ವಹಿಸುವ ಪಕ್ಷ. ಆದರೆ ಇತ್ತೀಚಿನ ಘಟನೆಗಳಿಂದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳು ದುಃಖಿತರಾಗಿದ್ದು, ನಾನೂ ಅದೇ ಭಾವನೆ ಹೊಂದಿದ್ದೇನೆ.

ಮುಸ್ಲಿಂ ಅಲ್ಪಸಂಖ್ಯಾತರು, ಸಮುದಾಯದ ಹಾಗೂ ಧಾರ್ಮಿಕ ನಾಯಕರು ದಾವಣಗೆರೆಯಷ್ಟೇ ಅಲ್ಲ, ರಾಜ್ಯಾದ್ಯಂತ ನಿರಾಶೆಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾನು ಹುದ್ದೆಯಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ.ಕೆಲವು ನಾಯಕರನ್ನು ಬದಿಗಿಟ್ಟು ಅಲ್ಪಸಂಖ್ಯಾತರೊಳಗೆ ಪ್ರತ್ಯೇಕ ಗುಂಪು ರಚಿಸುವ ಪ್ರಯತ್ನ ನಡೆದಿದೆ. ಇದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದೆ. ನಾನು ಸುಮಾರು 45 ವರ್ಷಗಳಿಂದ ಕಾಂಗ್ರೆಸ್‌ ನಲ್ಲಿದ್ದೇನೆ. ನನ್ನ ಅನುಭವದಲ್ಲಿ ಇದು ಸರಿಯಾದ ಕ್ರಮವಲ್ಲ; ಭವಿಷ್ಯದಲ್ಲಿಯೂ ಉತ್ತಮ ಫಲಿತಾಂಶ ನೀಡುವುದಿಲ್ಲ.

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ನನಗೆ ಗೌರವವಾಗಿದೆ. 2023ರ ವಿಧಾನಸಭಾ ಚುನಾವಣೆಗಳು ಹಾಗೂ ನಂತರದ ಸಂಸತ್ ಚುನಾವಣೆಯಲ್ಲಿಯೂ ಪಕ್ಷಕ್ಕೆ ಅಗತ್ಯವಿದ್ದಾಗಲೆಲ್ಲಾ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿ ಫಲಿತಾಂಶಗಳನ್ನು ತೋರಿಸಿದ್ದೇನೆ.

ನಾನು ಇಡೀ ರಾಜ್ಯದಲ್ಲಿ ಸಂಚರಿಸಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮೌಲ್ಯಗಳು ಮತ್ತು ತತ್ವಗಳತ್ತ ಸೆಳೆಯಲು ಕೆಲಸ ಮಾಡಿದ್ದೇನೆ. ಅದರ ವಿವರಗಳು ಸಾರ್ವಜನಿಕವಾಗಿ ಲಭ್ಯವಿವೆ. ಅಲ್ಪಸಂಖ್ಯಾತ ಮತದಾರರು ಮತ್ತು ಪದಾಧಿಕಾರಿಗಳು ನಮ್ಮ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *