ದಾವಣಗೆರೆ: ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ; ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಇಂದು (ಮಾ.20) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ಬಿ ಫಾರಂ ಸಿಗುವ‌ ಮುನ್ನೇ ನಾಮಪತ್ರ ಸಲ್ಪಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ; ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ ಎಂದ ಸಮರ್ಥ್

ಟಿಕೆಟ್ ಆಕಾಂಕ್ಷಿಗಳ ಸಾಥ್

ಶ್ರೀನಿವಾಸ ದಾಸಕರಿಯಪ್ಪ ನಾಮಪತ್ರ ಸಲ್ಲಿಸುವ ವೇಳೆ ಯಶವಂತರಾವ್ ಜಾಧವ್, ಬಿ.ಜಿ. ಅಜಯಕುಮಾರ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಭ್ಯರ್ಥಿಯೊಂದಿಗೆ ಹಾಜರಿದ್ದು ಬೆಂಬಲ ಸೂಚಿಸಿದರು.

ಸೋಮವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ

ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದರು. ಸೋಮವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ‌ ಸಲ್ಲಿಸಲಿದ್ದಾರೆ. ನಂತರ ಮಾತನಾಡಿದ ಶ್ರೀನಿವಾಸ ದಾಸಕರಿಯಪ್ಪ, ಈ ದಿನ ಶುಭ ಮುಹೂರ್ತದ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮತದಾರರು ಬಿಜೆಪಿಯನ್ನು ಉತ್ಸುಕರಾಗಿದ್ದಾರೆ.ಸೋಮವಾರ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದರು.

ದಾವಣಗೆರೆ: ಸರಗಳ್ಳತನ ಮಾಡುತ್ತಿದ್ದ 5 ಆರೋಪಿಗಳ ಬಂಧನ;‌ 22.12 ಲಕ್ಷ ಮೌಲ್ಯದ ಬಂಗಾರದ ಆಭರಣ,ಕಾರು, ಬೈಕ್ ವಶ

ಒಂದಾದ ನಾಯಕರು

ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯ ಕೊನೆಗೊಂಡಿದ್ದು, ಜಿ.ಎಂ. ಸಿದ್ದೇಶ್ವರ್ ಮತ್ತು ಎಂ.ಪಿ. ರೇಣುಕಾಚಾರ್ಯ ನಡುವಿನ ಭಿನ್ನಾಭಿಪ್ರಾಯ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ದಾವಣಗೆರೆ ನಗರದ ಅರ್ಬನ್ ಬ್ಯಾಂಕ್ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಇಬ್ಬರೂ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ವೇದಿಕೆಯ ಮೇಲೆ ಪರಸ್ಪರ ಕೈ ಎತ್ತುವ ಮೂಲಕ ‘ಬಿಜೆಪಿ ಒಂದಾಗಿದೆ ಎಂಬ ಸಂದೇಶ ರವಾನಿಸಿದರು.  ಜಿಲ್ಲಾ ಬಿಜೆಪಿಯಲ್ಲಿದ್ದ ಬಣ  ತಿಲಾಂಜಲಿ ಹಾಡಿರುವ ನಾಯಕರು, ಒಗ್ಗಟ್ಟಿನಿಂದ ಚುನಾವಣೆ ಗೆಲ್ಲುವ ಶಪಥ ಮಾಡಿದ್ದಾರೆ.

ಈ ಒಗ್ಗಟ್ಟು ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಆನೆ ಬಲ ತಂದಿದೆ. ಹಿರಿಯ ನಾಯಕರ ಬೆಂಬಲ ಮತ್ತು ಕಾರ್ಯಕರ್ತರ ಉತ್ಸಾಹ ಬಿಜೆಪಿ ಗೆಲುವಿಗೆ ದಾರಿ ಆಗುತ್ತಾ ಎಂಬುದಕ್ಕೆ ಮೇ 4 ರಂದು ಉತ್ತರ ಸಿಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *