Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ರೆಡ್ಡಿ ಸಹೋದರರ ಹಣಕಾಸಿನ ಸಹಾಯ ಕಾರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ರೆಡ್ಡಿ ಸಹೋದರರ ಹಣಕಾಸಿನ ಸಹಾಯ ಕಾರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ವಿಜಯನಗರ: ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಸರ್ಕಾರ ಬರಬೇಕಾದ್ರೆ ಬಳ್ಳಾರಿ ರೆಡ್ಡಿ ಸಹೋದರರು ಹಣದ ಸಹಾಯ ಕಾರಣ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಬಹಿರಂಗ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹರಪನಹಳ್ಳಿಯಲ್ಲಿ 2008 ಕ್ಕಿಂತ ಮೊದಲು ಬಿಜೆಪಿ ಸರ್ಕಾರ ಇರಲಿಲ್ಲ. ಸರ್ಕಾರ ಬರಬೇಕಿದ್ದರೆ ಹಣ ಬೇಕು. ಈ ವಿಚಾರವನ್ನು ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರು ಕರುಣಾಕರ ರೆಡ್ಡಿ ಬಳಿ ಹೇಳಿದ್ದರು. ತಕ್ಷಣ ಕರುಣಾಕರ ರೆಡ್ಡಿ ಅವರು ಜನಾರ್ದನ ರೆಡ್ಡಿ ಅವರಿಗೆ ಪೋನ್ ಮಾಡಿದ್ದರು. ಒಂದೇ ಮಾತಿಗೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಬೇಕಾದ್ರೆ ನಾನು ಹಣದ ಸಹಾಯ ಮಾಡುವೆ ಎಂದು ಹೇಳಿ ಹಣಕಾಸಿನ ಸಹಾಯವನ್ನು ರೆಡ್ಡಿ ಸಹೋದರರು ಮಾಡಿದ್ದರು ಎಂದು ನೆನಪು ಮಾಡಿಕೊಂಡರು.

ಆರು ವರ್ಷಗಳ ಬಳಿಕ ಅಣ್ಣ ತಮ್ಮಂದಿರು ಒಂದಾಗಿದ್ದಾರೆ. ಬಳ್ಳಾರಿ ರೆಡ್ಡಿ ಸಹೋದರ ನಡುವೆ ನಿರ್ಮಾಣ ಆಗಿದ್ದ ಕದನಕ್ಕೆ ತೆರೆ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಶಾಸಕರಾದ ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top