ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ಸಿನ ಅನೇಕ ನಾಯಕರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದು, ಜೈಲಿನಿಂದ ಮೆರವಣಿಗೆ ಮಾಡ್ಕೊಂಡು ಬಂದು ಪಟ್ಟ ಕಟ್ಟುವಾಗಲೇ ಯೋಚಿಸಬೇಕಿತ್ತು ಬಿಜೆಪಿ ವ್ಯಂಗ್ಯ ಮಾಡಿದೆ.
ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವೇ?
ಅಕ್ರಮಗಳ ಸರದಾರನನ್ನು ಜೈಲಿನಿಂದ ಮೆರವಣಿಗೆ ಮಾಡಿಕೊಂಡು ಬಂದು ಪಟ್ಟ ನೀಡುವಾಗಲೇ ಯೋಚಿಸಬೇಕಿತ್ತು,
ತನಿಖಾ ಸಂಸ್ಥೆಗಳು ಸ್ವಾಯತ್ತವಾಗಿರುತ್ತವೆ ಎಂಬುದು ಲೋಕಸತ್ಯ.
ಸಿಬಿಐ ದಾಳಿಯನ್ನು ಖಂಡಿಸುವ @INCKarnataka, ಏಕೆ @DKShivakumar ಅವರ ಅಕ್ರಮಗಳನ್ನು ಖಂಡಿಸುವುದಿಲ್ಲ?
— BJP Karnataka (@BJP4Karnataka) October 5, 2020
ರಾಜ್ಯ ಬಿಜೆಪಿ ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದೆ. ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವೇ? ಅಕ್ರಮಗಳ ಸರದಾರನನ್ನು ಜೈಲಿನಿಂದ ಮೆರವಣಿಗೆ ಮಾಡಿಕೊಂಡು ಬಂದು ಪಟ್ಟ ನೀಡುವಾಗಲೇ ಯೋಚಿಸಬೇಕಿತ್ತು ಎಂದು ವ್ಯಂಗ್ಯ ಮಾಡಿದೆ.

ತನಿಖಾ ಸಂಸ್ಥೆಗಳು ಸ್ವಾಯತ್ತವಾಗಿರುತ್ತವೆ ಎಂಬುದು ಲೋಕಸತ್ಯ. ಸಿಬಿಐ ದಾಳಿಯನ್ನು ಖಂಡಿಸುವ ಕಾಂಗ್ರೆಸ್ ಪಕ್ಷ ಏಕೆ ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳನ್ನು ಖಂಡಿಸುವುದಿಲ್ಲ? ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.
ರಾಜಕೀಯ ದುಷ್ಟತನದ ಪರಮಾವಧಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.



