Connect with us

Dvgsuddi Kannada | online news portal | Kannada news online

ಬಿಜೆಪಿ ಪ್ರತೀಕಾರದ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಬಿಜೆಪಿ ಪ್ರತೀಕಾರದ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ್ದು, ಈ ದಾಳಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಇದೊಂದು  ಬಿಜೆಪಿಯ ಪ್ರತೀಕಾರದ ರಾಜಕೀಯ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ಪ್ರತೀಕಾರದ ರಾಜಕೀಯದಲ್ಲಿ ನಿರತವಾಗಿದೆ. ಈ ಮೂಲಕ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಡಿಕೆ ಶಿವಕುಮಾರ್‌ ಅವರ ಮೇಲೆ ನಡೆದಿರುವ ಇವತ್ತಿನ ಸಿಬಿಐ ದಾಳಿಯು ಉಪಚುನಾವಣೆಯಲ್ಲಿನ ನಮ್ಮ ಸಿದ್ಧತೆಯನ್ನು ಹಳಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top