ನಾನು ದನದ ಮಂಸ ತಿನ್ನುತ್ತೇನೆ; ನನ್ನ ಹಕ್ಕು ಕೇಳೋರು ಯಾರು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ನಾನು ದನದ ಮಾಂಸ ತಿನುತ್ತೇನೆ.  ಅದು ನನ್ನ ಆಹಾರ ಪದ್ಧತಿ, ಹಕ್ಕು. ಅದನ್ನ ಕೇಳೋದಕ್ಕೆ ನೀನು ಯಾರು ಅಂತಾ ಅಧಿವೇಶನದಲ್ಲಿಯೇ  ಕೇಳಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ವಿಚಾರಗಳ ಬಗ್ಗೆ ನಮಗೆ ಮೊದಲು ಸ್ಪಷ್ಟತೆ ಇರಬೇಕು. ಗೋ ಮಾತೆಯನ್ನು ನಾವು ಪೂಜಿಸುತ್ತೇವೆ ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಅವುಗಳನ್ನ ಏನ್ ಮಾಡೋದು ಹೇಳಿ ಎಂದರು.

ಕಾಂಗ್ರೆಸ್ ನವರು ಇದನ್ನ ಸ್ಪಷ್ಟವಾಗಿ ಹೇಳಬೇಕು. ಬೇರೆ ಜಾತಿಯವರು ಏನೆಂದುಕೊಳ್ಳುತ್ತಾರೆ ಎಂದು ನಮ್ಮವರು ಮೌನಕ್ಕೆ ಶರಣಾಗುತ್ತಾರೆ. ಇದನ್ನು ಮೊದಲು ನಾವು ಬಿಡಬೇಕು. ನಮ್ಮ ಸಿದ್ಧಾಂತವನ್ನು ನಾವು ಹೇಳಬೇಕು ಎಂದು ಸ್ವಪಕ್ಷೀಯರಿಗೆ ಹೇಳಿದರು.

1964ರಲ್ಲಿ ಗೋ ಹತ್ಯೆ ಕಾನೂನು ತಂದಿದ್ದೆವು, ಆಗ ಬಿಜೆಪಿಯವರು ಇದ್ದರಾ? ಬಿಜೆಪಿಗಿಂತ ಹೆಚ್ಚು ಕಾರ್ಯಕರ್ತರ ಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದರೆ, ಬಡವರಿಗೆ ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ, ದಲಿತರಿಗೆ ಹಿನ್ನಡೆಯಾದಂತೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *