Connect with us

Dvgsuddi Kannada | online news portal | Kannada news online

ಇಂದಿರಾ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ..?  ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಕಿಡಿ  

ರಾಜಕೀಯ

ಇಂದಿರಾ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ..?  ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಕಿಡಿ  

ಶಿವಮೊಗ್ಗ: ಲವ್ ಜಿಹಾದ್ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಕ್ರಾಸ್ ಬೀಡ್ ಬಗ್ಗೆ ಮಾತನಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರಕ್ಕೆ ಸಬಂಧಿಸಿದಂತೆ ಸಿದ್ದರಾಮಯ್ಯ  ವಿರುದ್ಧ ಕಿಡಿಕಾರಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಲವ್ ಜಿಹಾದ್ ವಿಚಾರದಲ್ಲಿ ಸಿದ್ದರಾಮಯ್ಯ ಕ್ರಾಸ್ ಬೀಡ್ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯನವರಿಗೆ ಹೆಣ್ಣುಮಕ್ಕಳು, ಮೊಮ್ಮಗಳು ಇಲ್ಲ. ಅದಕ್ಕೆ ಅವರಿಗೆ ನೋವು ಅರ್ಥವಾಗಲ್ಲ. ಇಂದಿರಾ ಗಾಂಧಿ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ? ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ಇಂತಹ ಪದ ಬಳಕೆ ಮಾಡಲು ನಾಚಿಕೆಯಾಗಬೇಕು. ಅವರು ಕಾಂಗ್ರೆಸ್ ನಲ್ಲಿರಲು ಅಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ವಯಸ್ಸಾದ  ಹಸುವನ್ನು ಏನು ಮಾಡಬೇಕು ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ನಿಮ್ಮ ತಾಯಿಗೆ ವಯಸ್ಸಾಗಿದೆ ಎಂದು ಏನು ಮಾಡುತ್ತೀರಿ? ಗೋವು ನಮಗೆ ತಾಯಿ ಸಮಾನ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top