Connect with us

Dvgsuddi Kannada | online news portal | Kannada news online

ಕೇಂದ್ರ ಸಚಿವ ಸದಾನಂದಗೌಡ ಅಸ್ವಸ್ಥ; ಏಮರ್ಜೆನ್ಸಿ ವಾರ್ಡ್ ಗೆ ದಾಖಲು

ಪ್ರಮುಖ ಸುದ್ದಿ

ಕೇಂದ್ರ ಸಚಿವ ಸದಾನಂದಗೌಡ ಅಸ್ವಸ್ಥ; ಏಮರ್ಜೆನ್ಸಿ ವಾರ್ಡ್ ಗೆ ದಾಖಲು

ಬೆಂಗಳೂರು: ಲೋ ಶುಗರ್‌ ನಿಂದ ಅಸ್ವಸ್ಥರಾದ ಸಚಿವ ಡಿ.ವಿ ಸದಾನಂದ ಗೌಡ ಅವರನ್ನ ಬೆಂಗಳೂರಿನ ಏರ್ಪೋರ್ಟ್‌ ರಸ್ತೆಯಯಲ್ಲಿರುವ ಆಸ್ಟರ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಮರ್ಜೆನ್ಸಿ ವಾರ್ಡ್ʼನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು, ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ವಸ್ಥರಾದರು. ಕೂಡಲೇ ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಸಚಿವರನ್ನ ಆಂಬುಲೆನ್ಸ್‌ ಮೂಲಕ ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದ್ದು,‌ ನಗರದ ಅಸ್ಟರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಸಿದ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ, ತಂದೆಯ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಆಗತ್ಯವಿಲ್ಲ. ಫ್ಯಾಮಿಲಿ ಡಾಕ್ಟರ್‌ ಸಲಹೆಯ ಮೇರೆಗೆ ಆಸ್ಪತ್ರೆಗೆ ಕರೆತರಲಾಗಿದೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top