ನಾಳೆ ದೆಹಲಿಗೆ ಸಿದ್ದರಾಮಯ್ಯ; ರಾಜ್ಯ ರಾಜಕಾರಣ ಬಗ್ಗೆ ಚರ್ಚೆ ಸಾಧ್ಯತೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಸುಮಾರು ಒಂದು ವರ್ಷದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು,  ನಾಳೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ರಾಜರಾಜಕಾರಣ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಕೊರೊನಾಕಾರಣದಿಂದ ಸಿದ್ದರಾಮಯ್ಯ ಅವರು ಕಳೆದ ಒಂದು ವರ್ಷದಿಂದ ದೆಹಲಿ ಪ್ರವಾಸ ಮುಂದೂಡುತ್ತ ಬಂದಿದ್ದರು.  ರಾಹುಲ್‍ಗಾಂಧಿ ಭೇಟಿಗೆ ಅನೇಕ ಸಲ ಸಮಯ ಕೇಳಿದ್ದರಾದರೂ, ಸಿದ್ದರಾಮಯ್ಯಗೆ  ಅವಕಾಶ ಸಿಕ್ಕಿರಲಿಲ್ಲ. ಇದೀಗ ನಾಳೆ ಸಂಜೆ 4 ಗಂಟೆಗೆ ರಾಹುಲ್‍ಗಾಂಧಿ ಸಮಯ ನೀಡಿರುವುದರಿಂದ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.

ನಾಳೆ ಬೆಳಗ್ಗೆ 9.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ ಸಂಜೆ 4 ಗಂಟೆಗೆ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ರಾತ್ರಿ ದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.  ಫೆ.17ರಂದು ಮಧ್ಯಾಹ್ನ 2.10ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್‍ನ ಹಲವು ನಾಯಕರುಗಳನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *