Connect with us

Dvgsuddi Kannada | online news portal | Kannada news online

ಕೃಷಿ ಮಸೂದೆ ವಿರೋಧಿಸಿ ಮುಂದಿನ ತಿಂಗಳು ಕಿಸಾನ್ ಯಾತ್ರೆ: ಸಚಿನ್ ಮೀಗಾ

ಪ್ರಮುಖ ಸುದ್ದಿ

ಕೃಷಿ ಮಸೂದೆ ವಿರೋಧಿಸಿ ಮುಂದಿನ ತಿಂಗಳು ಕಿಸಾನ್ ಯಾತ್ರೆ: ಸಚಿನ್ ಮೀಗಾ

ಡಿವಿಜಿ ಸುದ್ದಿ, ದಾವಣಗೆರೆ: ಕೃಷಿ ಮಸೂದೆ ವಿರೋಧಿಸಿ ಮುಂದಿನ ತಿಂಗಳು ರಾಜ್ಯದಲ್ಲಿ ಕಿಸಾನ್ ಯಾತ್ರೆ ಮೂಲಕ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆದರಿಕೆ ಪತ್ರದ ಮೂಲಕ ಸುಗ್ರೀವಾಜ್ಞೆಹೊರಡಿಸಿರುವ ಬಿಜೆಪಿ ಸರ್ಕಾರ. ಜನ ವಿರೋಧಿ ರೈತ ವಿರೋಧಿ ಮಸೂದೆ ಜಾರಿಗೆ ತಂದಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ಮಾರುಕಟ್ಟೆಯಿಂದ ಹೊರಗೆ ಮಾರಾಟ ಮಾಡಬೇಕಾಗುತ್ತದೆ ಇದರಿಂದ ಎಪಿಎಂಸಿ ಸಂಪೂರ್ಣ ಮುಚ್ಚಿ ಹೋಗುತ್ತದೆ ಅಂತಾರಾಷ್ಟ್ರೀಯ ಮಾರುಕಟ್ಟೆ ಹೆಸರಲ್ಲಿ ರೈತರ ಶೋಷಣೆ ನಡೆಯುತ್ತದೆ ರೈತರು ಉದ್ಯಮಿಗಳ ಗುಲಾಮರಾಗಬೇಕಾಗುತ್ತದೆ ಎಂದು ತಿಳಿಸಿದರು.

ಫಸಲ್ ಭೀಮಾ ಬೆಳೆ ವಿಮೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಆರೋಪ ಆಡಳಿತ ನಡೆಸಿದ ಎಲ್ಲಾ ಪಕ್ಷಗಳ ಮೇಲೆ ಇದೆ.  ಆದರೆ ಸ್ವಾತಂತ್ರ್ಯದ ಬಳಿಕ ರೈತರ ದೊಡ್ದನ್ನ ದೋಚಿರುವುದು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ, ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಾತಿ ಶಿವಕುಮಾರ್, ಪ್ರವೀಣ್ ಕುಮಾರ್ ಎಸ್ ಕೆ. ಮಾಯಕೊಂಡ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಲೇಶ್ ಬಸವನಾಳ್ ಸೇರಿದಂತೆ ಕಿಸಾನ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});