60 ಹಿರಿಯ ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದಾರೆ: ಡಿ.ಕೆ. ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಬೇರೆ ಪಕ್ಷದ 60 ಹಿರಿಯ ನಾಯಕರು ಕಾಂಗ್ರೆಸ್‌ ಸೇರಲು ಬಯಸಿ ಅರ್ಜಿ ಹಾಕಿದ್ದಾರೆ.  ಅವರ ಅರ್ಜಿ ಪರಿಶೀಲಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ವಿಧಾನಪರಿಷತ್‌ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ಕಾಂಗ್ರೆಸ್  ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದ ಅವರು, ಬೇರೆ ಪಕ್ಷಗಳಿಂದ 60ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಲು ಬಯಸಿದ್ದಾರೆ.  ಬಗ್ಗೆ ನಿರ್ಧರಿಸಲು ಈಗಾಗಲೇ ಒಂದು ಸಮಿತಿ ರಚಿಸಿದ್ದೇವೆ. ಈ ಸಮಿತಿಗೆ 60 ಅರ್ಜಿಗಳು ಸಲ್ಲಿಕೆ ಆಗಿವೆ. ರಮೇಶ್ ಬಾಬು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು ಎಂದರು.

congress dvgsuddi

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಕೊರೊನಾ ಸಮಯದಲ್ಲಿ 1,600 ಕೋಟಿಯ ಪ್ಯಾಕೇಜ್ ಘೋಷಿಸಿದ್ದರು. ಆ ಮೊತ್ತ ಯಾವ, ಯಾವ ಕ್ಷೇತ್ರಗಳಿಗೆ ತಲುಪಿದೆ ಎಂದು ಅಧಿವೇಶನದ ಆರಂಭದಲ್ಲಿಯೇ ಮಾಹಿತಿ‌ ನೀಡಲಿ ಎಂದು ಆಗ್ರಹಿಸಿದರು.

ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಇವರನ್ನು ಕರೆದುಕೊಂಡು ಮುಖ್ಯಮಂತ್ರಿ ದೆಹಲಿಗೆ ಹೋಗಬೇಕಿತ್ತು. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಎಂದು ನಾವು ಸಾಕಷ್ಟು ಮನವಿ ಮಾಡಿದ್ದೇವೆ. ಆದರೆ, ಮುಖ್ಯಮಂತ್ರಿ ಸ್ಪಂದಿಸಿಲ್ಲ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *