Connect with us

Dvgsuddi Kannada | online news portal | Kannada news online

ಕುಮಾರಸ್ವಾಮಿ ಹೇಳಿಕೆಗಳಿಗೆಲ್ಲ ಪ್ರತಿಕ್ರಿಯಿಸುವುದಿಲ್ಲ : ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಕುಮಾರಸ್ವಾಮಿ ಹೇಳಿಕೆಗಳಿಗೆಲ್ಲ ಪ್ರತಿಕ್ರಿಯಿಸುವುದಿಲ್ಲ : ಸಿದ್ದರಾಮಯ್ಯ

ಡಿವಿಜಿ ಸುದ್ದಿ, ತುಮಕೂರು: ರಾಜಕೀಯವೇ ಬೇರೆ ಸ್ನೇಹವೇ ಬೇರೆ. ಕುಮಾರಸ್ವಾಮಿ ಜವಾಬ್ದಾರಿಯಿಂದ ರಾಜಕೀಯ ಹೇಳಿಕೆಗಳನ್ನು ಕೊಡಬೇಕು. ಕುಮಾರಸ್ವಾಮಿ ನೀಡುವ ರಾಜಕೀಯ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಸಿ.ಎಂ. ರಾಜೇಶ್ ಗೌಡ ಬಿಜೆಪಿ ಸೇರಲು ನಾನು ಕಾರಣ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ, ಅವನಂತಹ ಪೆದ್ದ ಯಾರೂ ಇಲ್ಲ. ರಾಜೇಶ್, ನನ್ನ ಮಗನ ಸ್ನೇಹಿತ. ನನ್ನ ಸ್ನೇಹಿತ ಅಲ್ಲ. ನನ್ನ ವಯಸ್ಸು ಎಷ್ಟು ಆತನ ವಯಸ್ಸು ಎಷ್ಟು? ರಾಜೇಶ್ ತಂದೆ ಸಿ.ಪಿ. ಮೂಡಲಗಿರಿಯಪ್ಪ ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದವರು. ಆ ವಿಶ್ವಾಸದಿಂದ ಕುಮಾರಸ್ವಾಮಿಯೇ ರಾಜೇಶ್‌ನನ್ನು ಬಿಜೆಪಿಗೆ ಕಳುಹಿಸಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಾವು ಗೆಲವು ಸಾಧಿಸುತ್ತೇವೆ. ಶಿರಾದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆದರೆ ಅನುಕಂಪ ಜೆಡಿಎಸ್‌ನವರ ಕೈ ಹಿಡಿಯುವುದಿಲ್ಲ. ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ  ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳಬೇಕು. ಇದರಿಂದ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಧ್ಯ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top