ರಾಜ್ಯ ಬಿಜೆಪಿ ಸರ್ಕಾರ ಎಷ್ಟು ಬೇಗ ತೊಲಗುತ್ತೋ ಅಷ್ಟು ಒಳ್ಳೆದು: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಎಷ್ಟು ಬೇಗ ತೊಲಗುತ್ತೋ ಅಷ್ಟು ಒಳ್ಳೆಯದು. ಪಕ್ಷ ಬಿಟ್ಟು ಹೋದವರ ವಿಚಾರದಲ್ಲಿ‌ ನಾನು ಪಾರ್ಟಿನೂ ಅಲ್ಲ, ಸಾಕ್ಷಿಯೂ ಅಲ್ಲ. ನಾನ್ಯಾಕೆ ಅವರ ಪರ ಮಾತಾಡಲಿ ಎಂದು ವಿಪಕ್ಷ ನಾಯಕೆ ಸಿದ್ದರಾಮಯ್ಯ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಾಯಕತ್ವ ಬದಲಾಗುತ್ತೋ ಇಲ್ಲವೋ ಗೊತ್ತಿಲ್ಲ. ಎಂಟಿಬಿ ನಾಗರಾಜ್, ಶಂಕರ್ ಅವರನ್ನೆಲ್ಲ ಮಂತ್ರಿ ಮಾಡಲಿ ಬಿಡಲಿ ನನಗೇನಾಬೇಕು. ವ್ಯಾಪಾರ ಮಾಡಿಕೊಂಡು ಹೋಗಿರೋರು ಅವರು. ಅವರು ಏನು ವ್ಯಾಪಾರ ಮಾಡ್ಕೊಂಡಿದ್ದಾರೋ ನನಗೇನು ಗೊತ್ತು ಎಂದರು.

ವೀರಶೈವ- ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವ ವಿಷಯದ ಕುರಿತು ಮಾತನಾಡಿ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸು ಇಲ್ಲದೆ ಯಾವುದೇ ಸಮುದಾಯಕ್ಕೆ ಒಬಿಸಿ ಸ್ಥಾನಮಾನ ನೀಡಲು ಬರಲ್ಲ. ಹಿಂದುಳಿದ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಲು ಏನಾದರೊಂದು ಆಧಾರ ಬೇಕಲ್ಲ. ಯಾವ ವರದಿ ಇದೆ.ನಾನು ಯಾವುದೇ ಸಮುದಾಯದ ಪರವೂ ಇಲ್ಲ, ವಿರುದ್ಧವೂ ಇಲ್ಲ. ಆದರೆ, ಯಾವ್ಯಾವ ಸಮುದಾಯಕ್ಕೆ ಒಬಿಸಿ ಸ್ಥಾನಮಾನ ಪಡೆಯುವ ಅರ್ಹತೆ ಇದೆಯೋ, ಆ ಎಲ್ಲ ಸಮುದಾಯಗಳಿಗೂ ನೀಡಬೇಕು. ಈ ವಿಚಾರ ಗೊತ್ತಾಗಿದ್ದರಿಂದಲೇ ಸಚಿವ ಸಂಪುಟ ಕಾರ್ಯಸೂಚಿಯಿಂದ ವೀರಶೈವ ಲಿಂಗಾಯತ ಒಬಿಸಿ ಶಿಫಾರಸ್ಸು ಹಿಂಪಡೆದಿರಬೇಕೆಂದು ಎಂದು ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *