ಒಂದು ತಿಂಗಳಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭೂಹಗರಣ ದಾಖಲೆ ಬಿಡುಗಡೆ: ಎಸ್.ಆರ್. ಹಿರೇಮಠ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ರಾಯಚೂರು: ಒಂದು ತಿಂಗಳಲ್ಲಿ  ಮಾಜಿ ಸಿಎಂ ಹೆಚ್ ಡಿಕುಮಾರಸ್ವಾಮಿ ಭೂಹಗರಣದ ಸಂಪೂರ್ಣ ದಾಖಲೆ ಬಿಚ್ಚಿಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಮನಗರದ ಕೇತಗಾನಹಳ್ಳಿಯಲ್ಲಿ  ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುತ್ತೇನೆ. ಮಾದೇಗೌಡರು ಹೆಚ್ ಡಿಕೆ ಭೂ ಕಬಳಿಕೆ ವಿರುದ್ಧ ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.

ಕಾಫಿ ಡೇ ಹಗರಣ ಕುರಿತು ಸಿಬಿಐ ನಿವೃತ್ತ ಡಿಐಜಿ ಅಶೋಕ ಮಲ್ಹೋತ್ರ ವರದಿ ನೀಡಿದ್ದಾರೆ. ಆದರೆ, ವರದಿಯಲ್ಲಿ ಅನೇಕ ಭ್ರಷ್ಟರ ,ಭ್ರಷ್ಟತನದ ಉಲ್ಲೇಖವಿಲ್ಲ. ಡಿಕೆಶಿ, ಮಾಳವಿಕ ಹೆಗಡೆ ಸೇರಿ ಅನೇಕರು ಸಾರ್ವಜನಿಕ ಹಣ ಲೂಟಿ ಮಾಡಿದ್ದಾರೆ. ಹಗರಣದ ಬಗ್ಗೆ ಗಂಭೀರವಾದ ತನಿಖೆ ನಡೆದಿಲ್ಲ. ನಿವೃತ್ತ ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಕಾಫೀ ಡೇ ಚೆರ್ಮನ್ ಆಗಿದ್ದಾರೆ. ರಂಗನಾಥ್ ಎಷ್ಟು ಪ್ರಮಾಣಿಕರೋ ಗೊತ್ತಿಲ್ಲ, ತನಿಖೆ ಸರಿಯಾಗಿ ನಡೆದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ.ಮಾಜಿ ಸಿಎಂ ಎಸ್ ಎಂ ಕೃಷ್ಣ ಕ್ರಿಮಿನಲ್ಸ್ ಗಳನ್ನ ಬೆಳೆಸಿದ್ದಕ್ಕೆ ರಾಜ್ಯದ ಜನರ ಕ್ಷಮೆಯಾಚಿಸಬೇಕು. ತಮ್ಮ ಅಪರಾಧಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಸೇರಿದ್ದಾರಾ ಎಂಬುದನ್ನು ತಿಳಿಸಲಿ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *