Connect with us

Dvgsuddi Kannada | online news portal | Kannada news online

ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ: ಇದು ರಾಜಕೀಯ ಪ್ರೇರಿತ ; ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ: ಇದು ರಾಜಕೀಯ ಪ್ರೇರಿತ ; ಡಿ.ಕೆ. ಶಿವಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೂ ನಮ್ಮ ನಾಯಕ ವಿನಾಯ್ ಕುಲಕರ್ಣಿಗೂ ಯಾವುದೇ ಸಂಬಂಧವಿಲ್ಲ. ಇದೊಂದು ರಾಜಕೀಯ ಪ್ರೇರಿತ ವಿಚಾರಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನಾನು ಗಮನಿಸಿದ್ದಾನೆ. ವಿನಾಯ್  ಕುಲಕರ್ಣಿ ಜೊತೆ ಮಾತನಾಡಿದ್ದೇನೆ. ರಾಜ್ಯ ಪೊಲೀಸರು ಈಗಾಗಲೇ ರಿಪೋರ್ಟ್ ಕೊಟ್ಟಿದ್ದಾರೆ. ಆದರೆ,  ಆಭಾಗದ ಬಿಜೆಪಿ ನಾಯಕರು ರಾಜಕೀಯ  ಪ್ರಭಾವದಿಂದ ನಮ್ಮ ನಾಯಕರನ್ನು  ಮಟ್ಟ ಹಾಕಲು ಮುಂದಾಗಿದ್ದಾರೆ. ಈ ಪ್ರಕರಣಕ್ಕೂ ನಮ್ಮ ನಾಯಕರಿಗೂ ಸಂಬಂಧವಿಲ್ಲ ಎಂದರು.

ನಾನು ಕೂಡ ಸಿಬಿಐ ತನಿಖೆ ಎದರಿಸಿದ್ದೇನೆ.  ಸಿಬಿಐ ಅಧಿಕಾರಿಗಳು ಕಾನೂನು ಮೂಲಕ ಹೋಗುತ್ತಾರೆ. ಕಾನೂನು ಬಿಟ್ಟು ವಿಚಾರಣೆ ಮಾಡುವುದಿಲ್ಲ. ಹೀಗಾಗಿ ನಮಗೆ ವಿಶ್ವಾಸವಿದೆ.  ದೇಶದ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ನಮ್ಮ ನಾಯಕರ ಪ್ರಭಾವ ಕುಗ್ಗಿಸಲು ಇಂತಹ  ರಾಜಕೀಯ ಪ್ರೇರಿತ ದಾಳಿ ನಡೆಯುತ್ತಿವೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top